ರಾಜಕೀಯ

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ದೊಡ್ಡ ತಿರುವು​; ಅಮಿತ್ ಶಾ ಭೇಟಿ ಮಾಡಿದ ಗಾಲಿ ಜನಾರ್ದನ ರೆಡ್ಡಿ, ತೀವ್ರ ಕುತೂಹಲ

ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು...

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಗುರುವಾರ ಭೇಟಿ ಮಾಡಿದ್ದು, ಇಬ್ಬರ ಭೇಟಿ ಸಾಕಷ್ಟು ಕುತೂಹಲಗಳನ್ನು ಕೆರಳಿಸಿದೆ.

ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜನಾರ್ಧನ ರೆಡ್ಡಿಯವರು, ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದ ಟಿಕೆಟ್​ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್​ ಜರ್ನಾದನ ರೆಡ್ಡಿ ಆಸೆಗೆ ಮಣೆ ಹಾಕದ ಕಾರಣ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದ್ದರು.

ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕಾಂಗ್ರೆಸ್‌ ಬೆಂಬಲಸಿದ್ದರು. ಆದರೆ, ಇದೀಗ ಏಕಾಏಕಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ