ಮಂಡ್ಯ ಸಂಸದೆ ಸುಮಲತಾ 
ರಾಜಕೀಯ

ಮಂಡ್ಯ ಟು ಚಿಕ್ಕಬಳ್ಳಾಪುರ?: ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ; ಕುತೂಹಲ ಕೆರಳಿಸಿದ ಹೈಕಮಾಂಡ್ ನಡೆ!

ಮುಂಬರುವ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅವರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಿಯುಂಟು ಮಾಡಿದೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅವರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಡ್ಡಿಯುಂಟು ಮಾಡಿದೆ.

ಇನ್ನು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ಬೆಂಬಲಿತ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು ರಾಜಧಾನಿಗೆ ತೆರಳಿದ್ದಾರೆ. ಸದ್ಯ ಬಿಜೆಪಿ ವರಿಷ್ಠರ ಕರೆ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.

2019ರಲ್ಲಿ ಮಂಡ್ಯ ಲೋಕಸಭೆ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅವರು ನಂತರ ಬಿಜೆಪಿಯನ್ನು ಬೆಂಬಲಿಸಿದ್ದರು. ಅದರಂತೆ ಈ ಬಾರಿ ಮಂಡ್ಯದ ಬಿಜೆಪಿ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೆ ತನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹಲವು ಬಾರಿ ವ್ಯಕ್ತಪಡಿಸಿದ್ದರು. ಆದರೆ ಮೈತ್ರಿ ಧರ್ಮಪಾಲನೆಗಾಗಿ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಹೀಗಾಗಿ ಬಿಜೆಪಿ ಹೈಕಮಾಂಡ್ ಕರೆ ಮಾಡಿದ ಹಿನ್ನೆಲೆ ಸುಮಲತಾ ಅಂಬರೀಶ್ ಅವರು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಸುಮಲತಾ ಅವರಿಗೆ ಮಂಡ್ಯ ಟಿಕೆಟ್ ಸಿಗುತ್ತಾ? ಇಲ್ಲವಾ? ಅಥವಾ ಮಂಡ್ಯ ಬಿಟ್ಟು ಚಿಕ್ಕಬಳ್ಳಾಪುರಕ್ಕೆ ತರುತ್ತಾರಾ ಎಂಬ ಪ್ರಶ್ನೆಗಳು ಮೂಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT