ಆರ್.ಅಶೋಕ್ 
ರಾಜಕೀಯ

ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗರಿಗೆ ಯಾವುದೇ ಅನ್ಯಾಯವಾಗಿಲ್ಲ: ಆರ್.ಅಶೋಕ್

ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.

ಬೆಂಗಳೂರು: ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಒಕ್ಕಲಿಗರಿಗೆ ಯಾವುದೇ ಅನ್ಯಾಯ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಭಾನುವಾರ ಹೇಳಿದರು.

ಬಿಜೆಪಿಯಲ್ಲಿ ಒಕ್ಕಲಿಗರನ್ನು ಕಡೆಗಣಿಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅಶೋಕ್ ಅವರು, ಇಲ್ಲಿಯವರೆಗೆ ಬಿಜೆಪಿ ಒಕ್ಕಲಿಗರನ್ನು ನ್ಯಾಯಯುತವಾಗಿ ನಡೆಸಿಕೊಂಡಿದೆ. ರಾಜ್ಯದಲ್ಲಿ ಇನ್ನೂ ಎಂಟು ಸ್ಥಾನಗಳಿಗೆ ಟಿಕೆಟ್ ಬಗ್ಗೆ ಪಕ್ಷವು ನಿರ್ಧರಿಸಿಲ್ಲ ಎಂದು ಹೇಳಿದರು.

ಒಕ್ಕಲಿಗರಲ್ಲಿ ಮೊರಸು, ಗಂಗಾಟ್ಕರ್ ಮತ್ತು ಕುಂಚಿಟಿಗ ಮುಂತಾದ ಹಲವಾರು ಪ್ರಬಲ ಉಪಜಾತಿಗಳಿವೆ. ಪಕ್ಷವು ತನ್ನ ಎರಡನೇ ಪಟ್ಟಿಯನ್ನು ಪ್ರಕಟಿಸಿದಾಗ ಈ ಎಲ್ಲಾ ಪ್ರಬಲ ಸಮುದಾಯಗಳಿಗೆ ಅವಕಾಶ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರದಿಂದ ತಮಗೆ ಟಿಕೆಟ್ ನೀಡಬೇಕೆಂದು ಸದಾನಂದಗೌಡ ಅವರು ಸಾಕಷ್ಟು ಲಾಬಿ ನಡೆಸಿದ್ದರು. ಆದರೆ ನಾಯಕರು ಬೇರೆ ಯೋಜನೆಗಳನ್ನು ಇಟ್ಟುಕೊಂಡು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಿದರು. ಈಗ, ಪಕ್ಷದ ಎಲ್ಲಾ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡಲು ನಿರ್ಧರಿಸಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT