ಗೀತಾ ಶಿವರಾಜ್ ಕುಮಾರ್ 
ರಾಜಕೀಯ

ದೊಡ್ಮನೆ ಕುಟುಂಬ ಚಿತ್ರೋದ್ಯಮದ ಆಸ್ತಿ; ಶಿವಮೊಗ್ಗದಲ್ಲಿ ಪ್ರಚಾರ ನಡೆಸುತ್ತೇವೆ: ಗೀತಾ ಬೆಂಬಲಕ್ಕೆ ನಿಂತ Sandalwood!

ಗೀತಾ ಶಿವರಾಜಕುಮಾರ್ ಪರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ವ್ಯಾಪಕ ಪ್ರಚಾರ ನಡೆಸಲು ಕನ್ನಡ ಚಿತ್ರರಂಗ ನಿರ್ಧರಿಸಿದೆ.

ಬೆಂಗಳೂರು: ಕನ್ನಡ ನಟ ಶಿವರಾಜಕುಮಾರ್ ಅವರ ಪತ್ನಿ, ಕರ್ನಾಟಕದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಮಗಳು ಮತ್ತು ಕನ್ನಡದ ಆರಾಧ್ಯ ದೈವ ಡಾ ರಾಜಕುಮಾರ್ ಅವರ ಸೊಸೆ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಹೀಗಾಗಿ ಗೀತಾ ಶಿವರಾಜಕುಮಾರ್ ಪರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ವ್ಯಾಪಕ ಪ್ರಚಾರ ನಡೆಸಲು ಕನ್ನಡ ಚಿತ್ರರಂಗ ನಿರ್ಧರಿಸಿದೆ.

ಬೆಂಗಳೂರಿನ ಗೀತಾ ಮತ್ತು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಮತ್ತು ಹಿರಿಯ ನಿರ್ಮಾಪಕ ಎನ್‌ಎಂ ಸುರೇಶ್ , ಗೀತಾ ನಾಮಪತ್ರ ಸಲ್ಲಿಸುವ ದಿನದಂದು ನಿರ್ಮಾಪಕರು, ವಿತರಕರು, ಪ್ರದರ್ಶಕರು ಮತ್ತು ಕೆಲವು ನಟರು ಸೇರಿದಂತೆ ಇಡೀ ಉದ್ಯಮವು ಶಿವಮೊಗ್ಗಕ್ಕೆ ಆಗಮಿಸಲಿದೆ. ದೊಡ್ಮನೆ (ಡಾ ರಾಜ್‌ಕುಮಾರ್ ಅವರ ಮನೆ) ಉದ್ಯಮಕ್ಕೆ ಆಸ್ತಿಯಾಗಿರುವುದರಿಂದ, ನಾವು ಗೀತಾ ಶಿವರಾಜಕುಮಾರ್ ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾತನಾಡಿ, ಉದ್ಯಮವು ಡಾ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಋಣಿಯಾಗಿರುವುದರಿಂದ, ಗೀತಾ ಅವರು ಜನರ ಸೇವೆ ಮಾಡಲು ಬಯಸುತ್ತಿರುವ ಕಾರಣ ಅವರನ್ನು ಬೆಂಬಲಿಸುವುದು ಉದ್ಯಮದ ಸದಸ್ಯರ ಕರ್ತವ್ಯವಾಗಿದೆ ಎಂದರು.

ಗೀತಾ ಅವರು ಬುಧವಾರ ಭದ್ರಾವತಿಯಿಂದ ಪ್ರಚಾರ ಆರಂಭಿಸಿದರೆ, ಶಿವರಾಜಕುಮಾರ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗುರುವಾರ ಬೈಂದೂರಿನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಗೀತಾ ಬಂಗಾರಪ್ಪ ಅವರ ಪುತ್ರಿಯಾಗಿರುವುದರಿಂದ ತಳಮಟ್ಟದ ಜನರನ್ನು ತಲುಪಲು ಕ್ಷೇತ್ರದಾದ್ಯಂತ ಹೋಬಳಿಗಳಲ್ಲಿಯೂ ಸಹ 300 ಕ್ಕೂ ಪ್ರಚಾರ ಸಭೆ ನಡೆಸಲು ಅವರು ಕ್ರಿಯಾ ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT