ಗೀತಾ ಶಿವರಾಜ್ ಕುಮಾರ್ 
ರಾಜಕೀಯ

ದೊಡ್ಮನೆ ಕುಟುಂಬ ಚಿತ್ರೋದ್ಯಮದ ಆಸ್ತಿ; ಶಿವಮೊಗ್ಗದಲ್ಲಿ ಪ್ರಚಾರ ನಡೆಸುತ್ತೇವೆ: ಗೀತಾ ಬೆಂಬಲಕ್ಕೆ ನಿಂತ Sandalwood!

ಗೀತಾ ಶಿವರಾಜಕುಮಾರ್ ಪರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ವ್ಯಾಪಕ ಪ್ರಚಾರ ನಡೆಸಲು ಕನ್ನಡ ಚಿತ್ರರಂಗ ನಿರ್ಧರಿಸಿದೆ.

ಬೆಂಗಳೂರು: ಕನ್ನಡ ನಟ ಶಿವರಾಜಕುಮಾರ್ ಅವರ ಪತ್ನಿ, ಕರ್ನಾಟಕದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಮಗಳು ಮತ್ತು ಕನ್ನಡದ ಆರಾಧ್ಯ ದೈವ ಡಾ ರಾಜಕುಮಾರ್ ಅವರ ಸೊಸೆ ಗೀತಾ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಹೀಗಾಗಿ ಗೀತಾ ಶಿವರಾಜಕುಮಾರ್ ಪರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ವ್ಯಾಪಕ ಪ್ರಚಾರ ನಡೆಸಲು ಕನ್ನಡ ಚಿತ್ರರಂಗ ನಿರ್ಧರಿಸಿದೆ.

ಬೆಂಗಳೂರಿನ ಗೀತಾ ಮತ್ತು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಮತ್ತು ಹಿರಿಯ ನಿರ್ಮಾಪಕ ಎನ್‌ಎಂ ಸುರೇಶ್ , ಗೀತಾ ನಾಮಪತ್ರ ಸಲ್ಲಿಸುವ ದಿನದಂದು ನಿರ್ಮಾಪಕರು, ವಿತರಕರು, ಪ್ರದರ್ಶಕರು ಮತ್ತು ಕೆಲವು ನಟರು ಸೇರಿದಂತೆ ಇಡೀ ಉದ್ಯಮವು ಶಿವಮೊಗ್ಗಕ್ಕೆ ಆಗಮಿಸಲಿದೆ. ದೊಡ್ಮನೆ (ಡಾ ರಾಜ್‌ಕುಮಾರ್ ಅವರ ಮನೆ) ಉದ್ಯಮಕ್ಕೆ ಆಸ್ತಿಯಾಗಿರುವುದರಿಂದ, ನಾವು ಗೀತಾ ಶಿವರಾಜಕುಮಾರ್ ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾತನಾಡಿ, ಉದ್ಯಮವು ಡಾ ರಾಜ್‌ಕುಮಾರ್ ಅವರ ಕುಟುಂಬಕ್ಕೆ ಋಣಿಯಾಗಿರುವುದರಿಂದ, ಗೀತಾ ಅವರು ಜನರ ಸೇವೆ ಮಾಡಲು ಬಯಸುತ್ತಿರುವ ಕಾರಣ ಅವರನ್ನು ಬೆಂಬಲಿಸುವುದು ಉದ್ಯಮದ ಸದಸ್ಯರ ಕರ್ತವ್ಯವಾಗಿದೆ ಎಂದರು.

ಗೀತಾ ಅವರು ಬುಧವಾರ ಭದ್ರಾವತಿಯಿಂದ ಪ್ರಚಾರ ಆರಂಭಿಸಿದರೆ, ಶಿವರಾಜಕುಮಾರ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗುರುವಾರ ಬೈಂದೂರಿನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಗೀತಾ ಬಂಗಾರಪ್ಪ ಅವರ ಪುತ್ರಿಯಾಗಿರುವುದರಿಂದ ತಳಮಟ್ಟದ ಜನರನ್ನು ತಲುಪಲು ಕ್ಷೇತ್ರದಾದ್ಯಂತ ಹೋಬಳಿಗಳಲ್ಲಿಯೂ ಸಹ 300 ಕ್ಕೂ ಪ್ರಚಾರ ಸಭೆ ನಡೆಸಲು ಅವರು ಕ್ರಿಯಾ ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT