ಸಾಂದರ್ಭಿಕ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ: ಅಂಚೆ ಮತದಾನಕ್ಕೆ 12 ಇಲಾಖೆ ಸಿಬ್ಬಂದಿಗೆ ಅವಕಾಶ!

ಅಧಿಕಾರಿಗಳ ಸಭೆ ನಡೆಸಿದ ಬಿಬಿಎಂಪಿ ಚುನಾವಣಾ ವಿಶೇಷ ಆಯುಕ್ತ ಸೆಲ್ವಮಣಿ ಆರ್ ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಲು ಆಯಾ ಇಲಾಖೆಗಳಿಂದ ಪಟ್ಟಿ ತಿಳಿಸಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 12 ವಿವಿಧ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಬಿಬಿಎಂಪಿ ಚುನಾವಣಾ ವಿಶೇಷ ಆಯುಕ್ತ ಸೆಲ್ವಮಣಿ ಆರ್ ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಲು ಆಯಾ ಇಲಾಖೆಗಳಿಂದ ಪಟ್ಟಿ ತಿಳಿಸಿದ್ದಾರೆ.

ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದೆ ಮತ್ತು ಅವರು ಅಂಚೆ ಮತದಾನಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿದರು. AVES ಅಡಿಯಲ್ಲಿ ಅರ್ಹ ಮತದಾರರು ಫಾರ್ಮ್ 12D ಅನ್ನು ಭರ್ತಿ ಮಾಡಬೇಕಾಗುತ್ತದೆ ಮತ್ತು ಶುಕ್ರವಾರದೊಳಗೆ (ಮಾರ್ಚ್ 22) ಸಲ್ಲಿಸಬೇಕು.

ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತದಾನ ಕೇಂದ್ರದಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಅಂಚೆ ಮತಪತ್ರಗಳನ್ನು ಅಂಚೆ ಮೂಲಕ ವಿತರಿಸುವ/ ತಲುಪಿಸುವ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದರು.

ಅರ್ಹರು

  • ವಿದ್ಯುತ್ ಇಲಾಖೆ

  • ಬಿ.ಎಸ್.ಎನ್.ಎಲ್

  • ರೈಲ್ವೆ ಇಲಾಖೆ

  • ಮಾಹಿತಿ ಇಲಾಖೆ

  • ಆಲ್ ಇಂಡಿಯಾ ರೇಡಿಯೋ

  • ಆರೋಗ್ಯ ಇಲಾಖೆ

  • ವಾಯುಯಾನ

  • ರಸ್ತೆ ಸಾರಿಗೆ ನಿಗಮ

  • ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ

  • ಮತದಾನದ ದಿನದಂದು ಚುನಾವಣಾ ಪ್ರಸಾರಕ್ಕಾಗಿ ಭಾರತದ ಚುನಾವಣಾ ಆಯೋಗದಿಂದ ಅನುಮತಿ ಪಡೆದ ಮಾಧ್ಯಮ ವ್ಯಕ್ತಿಗಳು

  • ಸಂಚಾರ ಪೊಲೀಸ್

  • ಆಂಬ್ಯುಲೆನ್ಸ್ ಸೇವೆಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT