ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ.

ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್‌ ಅಂತಿಮಗೊಳಿಸಲಾಗಿದೆ. ಇನ್ನು ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ.

ಪಟ್ಟಿಯಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್‌ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್‌ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಇಸಿ ಅಂತಿಮಗೊಳಿಸಿರುವ ಅಭ್ಯರ್ಥಿಗಳ ವಿವರ

  • ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ

  • ಬೆಳಗಾವಿ - ಮೃಣಾಲ್‌ ಹೆಬ್ಬಾಳಕರ್‌

  • ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ

  • ಬಾಗಲಕೋಟೆ - ಸಂಯುಕ್ತಾ ಪಾಟೀಲ್‌

  • ಧಾರವಾಡ - ವಿನೋದ್‌ ಅಸುಟಿ

  • ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ

  • ಕೊಪ್ಪಳ - ರಾಜಶೇಖರ ಹಿಟ್ನಾಳ್‌

  • ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ

  • ಬೀದರ್‌ - ರಾಜಶೇಖರ್‌ ಪಾಟೀಲ್‌

  • ದಕ್ಷಿಣ ಕನ್ನಡ - ಪದ್ಮರಾಜ್‌

  • ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ

  • ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ

  • ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌

  • ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ

  • ಮೈಸೂರು -ಎಂ.ಲಕ್ಷ್ಮಣ್‌

  • ರಾಯಚೂರು -ಜಿ.ಕುಮಾರ ನಾಯಕ್‌

  • ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!

ತಾಪಮಾನದಲ್ಲಿ ಮತ್ತಷ್ಟು ಕುಸಿತ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ, ವಾಯು ಗುಣಮಟ್ಟದಲ್ಲೂ ಬದಲಾವಣೆ

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

SCROLL FOR NEXT