ಕಾಂಗ್ರೆಸ್ vs ಬಿಜೆಪಿ 
ರಾಜಕೀಯ

ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ: ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹನುಮಾನ್ ಚಾಲೀಸಾ-ಆಜಾನ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಬೆಂಗಳೂರು: ಹನುಮಾನ್ ಚಾಲೀಸಾ-ಆಜಾನ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಹೇಳಿದೆ.

ಈ ತೇಜಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು. ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು. ಆದರೆ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ. ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಹೇಳಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಗರ್ತಪೇಟೆಯ ಶಾಸಕರು ಬಿಜೆಪಿಯವರೇ, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಬಿಜೆಪಿ ಪ್ರಾಪಗಾಂಡಾಗಳಿಗೆ ತಪರಾಕಿ ನೀಡಿದ್ದಾರೆ, ದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ.

ವೈಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು. ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್