ಬಿವೈ ರಾಘವೇಂದ್ರ 
ರಾಜಕೀಯ

ಚಿತ್ರದುರ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ದೂರು ದಾಖಲು

ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಶನಿವಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಘಟನೆ ವರದಿಯಾಗಿದೆ.

ಚಿತ್ರದುರ್ಗ: ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಶನಿವಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಘಟನೆ ವರದಿಯಾಗಿದೆ.

ರಾಘವೇಂದ್ರ ಭೋವಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಭಾಷಣ ನಡೆಸಿರುವ ಆರೋಪ ಕೇಳಿಬಂದಿದೆ. ಒಂದು ರಾಜಕೀಯ ಪಕ್ಷವನ್ನು ಅಧಿಕಾರಕ್ಕೆ ತರಲು ಚುನಾವಣೆ ನಡೆಯುತ್ತಿಲ್ಲ. ಬದಲಿಗೆ ಅದು ರಾಷ್ಟ್ರೀಯವಾದಿಗಳು ಮತ್ತು ರಾಷ್ಟ್ರ ವಿರೋಧಿಗಳ ನಡುವಿನ ಚುನಾವಣೆಯಾಗಿದೆ ಎಂದು ತಮ್ಮ ಭಾಷಣದಲ್ಲಿ ಅವರು ಹೇಳಿದ್ದಾರೆ. ಇದು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ ವೆಂಕಟೇಶ್, ನೀತಿ ಸಂಹಿತೆ ಉಲ್ಲಂಘನೆ ಕುರಿತು ಅವರಿಂದ ಮಾಹಿತಿ ಪಡೆಯಲಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕುಟುಂಬ ರಾಜಕಾರಣ ವಿರೋಧಿ ಹೇಳಿಕೆ ಬೆಂಬಲಿಸಿ ಮಾತನಾಡಿದ ರಾಘವೇಂದ್ರ, , ನನ್ನ ತಂದೆ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿದ್ದಾರೆ. ಎಬಿವಿಪಿಯಿಂದ ನಾನು ಇಲ್ಲಿಯವರೆಗೆ ಬೆಳೆದಿದ್ದೇನೆ. ಯಾವುದೇ ರಾಜಕೀಯ ಒತ್ತಡದಿಂದ ಪಕ್ಷ ಟಿಕೆಟ್ ನೀಡಿಲ್ಲ. ಜನರ ವಿಶ್ವಾಸ ಗೆದ್ದಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಆದ್ದರಿಂದ ನಾನು ಇಲ್ಲಿದ್ದೇನೆ ಎಂದರು.

ಭೋವಿ ಗುರುಪೀಠದಲ್ಲಿ ವಿವಿಧ ಸ್ವಾಮೀಜಿಗಳ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಸ್ವಸಾಮರ್ಥ್ಯ ಹಾಗೂ ತಳಮಟ್ಟದಿಂದ ಬೆಳೆದಿದ್ದೇನೆ. ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಪಕ್ಷ ಸಂಘಟಿಸುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಚುನಾವಣೆ ಗೀತಕ್ಕ ಮತ್ತು ರಾಘಣ್ಣ ನಡುವೆ ಅಲ್ಲ. ಬದಲಿಗೆ ವಿಭಿನ್ನ ಸಿದ್ದಾಂತ ಹೊಂದಿರುವ ಎರಡು ಪಕ್ಷಗಳ ಆಧಾರದ ಮೇಲೆ ನಡೆಯುತ್ತಿದೆ. ನನ್ನ ಎದುರಾಳಿಯ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿದ್ದೇನೆ. ನಾವು ಸುಲಭವಾಗಿ ಎದುರಾಳಿಯನ್ನು ಎದುರಿಸುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ನೀಡುತ್ತಿದೆ ಎಂಬ ಸಿಎಂ ಹೇಳಿಕೆಗೆ ಕಿಡಿಕಾರಿದ ರಾಘವೇಂದ್ರ, ಗ್ಯಾರಂಟಿಗಳನ್ನು ಸರಿಯಾಗಿ ಕಾರ್ಯಗತಗೊಳಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅದರ ಕಾರಣದಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಾಂಗ್ರೆಸ್ ಶಾಸಕರಿಗೆ ಮುಖವೇ ಇಲ್ಲ ಅವರ ಕ್ಷೇತ್ರಗಳಿಗೆ ಭೇಟಿ ನೀಡಿ. ಅವರು ತಮ್ಮ ಜವಾಬ್ದಾರಿಯನ್ನು ಪರಸ್ಪರ ವರ್ಗಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಚಿತ್ರದುರ್ಗಕ್ಕೆ ಅಭ್ಯರ್ಥಿ ನಾಮನಿರ್ದೇಶನ ವಿಳಂಬ ಕುರಿತು ಪ್ರತಿಕ್ರಿಯಿಸಿದ ರಾಘವೇಂದ್ರ, ಒಂದು ಅಥವಾ ಎರಡು ದಿನಗಳಲ್ಲಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಭ್ಯರ್ಥಿಯನ್ನು ಘೋಷಿಸಲಾಗುತ್ತದೆ. ಪಕ್ಷದಲ್ಲಿನ ಬಂಡಾಯ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT