ತೇಜಸ್ವಿ ಸೂರ್ಯ-ಸೌಮ್ಯರೆಡ್ಡಿ 
ರಾಜಕೀಯ

Loksabha Election 2024: ಸೌಮ್ಯ ರೆಡ್ಡಿ Vs ತೇಜಸ್ವಿ ಸೂರ್ಯ; 1991ರಿಂದ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಗೆ ಕಬ್ಬಿಣದ ಕಡಲೆ!

ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರತಿಷ್ಠಿತ ಕ್ಷೇತ್ರ ಎಂದೇ ಕರೆಯಲಾಗುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇದೀಗ ಸೂರ್ಯ vs ಸೌಮ್ಯ ಎಂಬಂತಾಗಿದೆ. ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಜಯ ದಾಖಲಿಸಲು ಕಸರತ್ತು ಆರಂಭಿಸಿದ್ದರೆ, ಇತ್ತ ಕಾಂಗ್ರೆಸ್ ನಿಂದ ಸಚಿವ ರಾಮಲಿಂಗಾ ರೆಡ್ಡಿಯ ಅವರ ಪುತ್ರಿ ಸೌಮ್ಯ ರೆಡ್ಡಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರತಿಷ್ಠಿತ ಕ್ಷೇತ್ರ ಎಂದೇ ಕರೆಯಲಾಗುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಇದೀಗ ಸೂರ್ಯ vs ಸೌಮ್ಯ ಎಂಬಂತಾಗಿದೆ.

ಬಿಜೆಪಿ ಹಾಲಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಜಯ ದಾಖಲಿಸಲು ಕಸರತ್ತು ಆರಂಭಿಸಿದ್ದರೆ, ಇತ್ತ ಕಾಂಗ್ರೆಸ್ ನಿಂದ ಸಚಿವ ರಾಮಲಿಂಗಾ ರೆಡ್ಡಿಯ ಅವರ ಪುತ್ರಿ ಸೌಮ್ಯ ರೆಡ್ಡಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು 1991ರಿಂದ ಸತತ ಎಂಟು ಗೆಲುವುಗಳೊಂದಿಗೆ ಬಿಜೆಪಿ ಭದ್ರಕೋಟೆಯಾಗಿದ್ದು, 1989ರಲ್ಲಿ ಮಾಜಿ ಸಿಎಂ ಆರ್ ಗುಂಡೂರಾವ್ ವಿಜಯಶಾಲಿಯಾದಾಗ ಇಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಚುನಾವಣೆಯಲ್ಲಿ ಗೆದ್ದಿತ್ತು.

ಆ ಬಳಿಕ ಇಲ್ಲಿಯವರೆಗೂ ಇಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿಲ್ಲ. ಕಳೆದ 32 ವರ್ಷಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ದಿಗ್ವಜಯವನ್ನೇ ಸಾಧಿಸುತ್ತಾ ಬಂದಿದ್ದು, ಈ ಬಾರಿಯೂ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆ ಇದೆ. ಈಗಾಗಲೇ ಬೆಂಗಳೂರು ದಕ್ಷಿಣದಿಂದ ಹಾಲಿ ಸಂಸದರಾದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದ್ದು, ಚುನಾವಣಾ ತಯಾರಿಯೂ ಜೋರಾಗಿಯೇ ನಡೆಯುತ್ತಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದಿವಗಂತ ಅನಂತ್ ಕುಮಾರ್ ಅವರು ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಹಿಡಿತವನ್ನು ಹೊಂದಿದ್ದರು. ಅವರ ಜನಪ್ರಿಯತೆ ಹಾಗೂ ಮೋದಿ ಅವರ ನಾಮಬಲದ ಮೇಲೆ ಕಳೆದ ಎರಡು ಬಾರಿಯೂ ಈ ಕ್ಷೇತ್ರದಲ್ಲಿ ಕಮಲ ಅರಳಿದ್ದು, ಈ ಬಾರಿಯೂ ಗೆಲ್ಲುವಿಗಾಗಿ ಕೈ ಕಮಲ ಪೈಪೋಟಿ ನಡೆಸುತ್ತಿದೆ.

ಈ ಬಾರಿ ಕಾಂಗ್ರೆಸ್‌ನಿಂದ ಕಣಕ್ಕೆ ಧುಮುಕಿರುವ ಮಾಜಿ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರು ತಮ್ಮ ನಿಷ್ಠಾವಂತ ಕಾರ್ಯಕರ್ತರೊಂದಿಗೆ ಬೆರೆಯುವ ಮೂಲಕ ಮತದಾರರ ಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ, ಮತ ಎಣಿಕೆ ಗೊಂದಲದಿಂದಾಗಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು. 2023ರಲ್ಲಿ ಅಸಿಂಧು ಮತಗಳನ್ನು ಹೊರತಂದು ಎಣಿಕೆ ಮಾಡಿದಾಗ ಸೌಮ್ಯಾ ಗೆದ್ದಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದರು. ಈ ವಿಷಯ ಹೈಕೋರ್ಟ್‌ನಲ್ಲಿದೆ. ಈ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರತೀ ಬಡಾವಣೆಯಲ್ಲಿ ಸಭೆ

ಇನ್ನು ಪ್ರತಿ ಕ್ಷೇತ್ರದ ಬಡಾವಣೆಯಲ್ಲಿ ಸಭೆ ನಡೆಸುವ ಮೂಲಕ ಕಾರ್ಯತಂತ್ರ ರೂಪಿಸುತ್ತಿದ್ದು, ಇಲ್ಲಿನ ಎಲ್ಲರನ್ನೂ ತಲುಪಲು ಅದೊಂದೇ ದಾರಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಭಾಗದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೂರು ಅಂದರೆ ವಿಜಯನಗರ, ಗೋವಿಂದರಾಜನಗರ ಮತ್ತು ಬಿಟಿಎಂ ಲೇಔಟ್ ಅನ್ನು ತನ್ನ ತೆಕ್ಕೆಯಲ್ಲಿ ಹೊಂದಿದೆ. ನಾಲ್ಕನೇ ಕ್ಷೇತ್ರದಲ್ಲೂ ಗೆದ್ದೆವು.. ಆದರೆ ಎಂದು ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದತ್ತ ಬೊಟ್ಟು ಅವರು ಮಾಡಿದರು. ಕಾಂಗ್ರೆಸ್ ತನ್ನ ಭರವಸೆಗಳು ಮತ್ತು ಭರವಸೆಗಳನ್ನು ಈಡೇರಿಸುತ್ತಿದೆ.

ಸೌಮ್ಯಾ ಮತ್ತು ಅವರ ತಂಡವು ಮತದಾರರೊಂದಿಗೆ ಸಂಪರ್ಕ ಸಾಧಿಸಲು ಸಾಮಾಜಿಕ ಮಾಧ್ಯಮವನ್ನು ಬಳಸುವುದರಲ್ಲಿ ಉತ್ತಮವಾಗಿದೆ ಮತ್ತು ಅದು ಪ್ರಯೋಜನವಾಗಿದೆ. ಈ ಹಿಂದೆ ಕೃಷ್ಣ ಬೈರೇಗೌಡ ಅವರು ಸ್ಪರ್ಧಿಸಿದ್ದಾಗ ಬಿಜೆಪಿ ಸಾವಿರಾರು ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿಸಿತ್ತು ಎಂದು ನಮ್ಮ ಪಕ್ಷ ದೂರಿತ್ತು, ಈ ಬಾರಿ ಬಿಜೆಪಿ ನ್ಯಾಯಯುತವಾಗಿ ಸ್ಪರ್ಧೆ ಮಾಡಿದರೆ ಖಂಡಿತಾ ಸೋಲುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ರಾಮಲಿಂಗಾರೆಡ್ಡಿ ಪುತ್ರಿ ಎಂಬ ಕಾರಣಕ್ಕೇ ಸೌಮ್ಯ ಎಂಬುವರು ಪಕ್ಷದ ಟಿಕೆಟ್ ಪಡೆದಿದ್ದಾರೆ ಎಂಬ ಟೀಕೆಗೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, ಹಾಲಿ ಸಂಸದ ತೇಜಸ್ವಿ ಸೂರ್ಯ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರ ಸೋದರಳಿಯ ಅಲ್ಲವೇ.. ಅವರಿಗೆ ಕುಟುಂಬ ರಾಜಕಾರಣದ ಆರೋಪ ಅಂಟಿಕೊಳ್ಳುವುದಿಲ್ಲವೇ? ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT