ಕೃಷಿ ಸಚಿವ ಚಲುವರಾಯಸ್ವಾಮಿ 
ರಾಜಕೀಯ

ಮಂಡ್ಯ ಮತದಾರರು ಬುದ್ದಿವಂತರು, ಭಾವನಾತ್ಮಕವಾಗಿ ಮಣಿಯಲ್ಲ; ಎಚ್‌ಡಿಕೆಯನ್ನು ಒಪ್ಪಲ್ಲ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ .

ಮಂಡ್ಯ: ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ, ಇದರ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿ ವೆಂಕಟರಮಣೇಗೌಡ ಅಥವಾ ಸ್ಟಾರ್ ಚಂದ್ರುಗೆ ಮತ ಕೇಳಲು ಹೊರಗಿನ ವರ್ಸಸ್ ಸ್ಥಳೀಯ ಕಾರ್ಡ್ ಆಡಲು ನಿರ್ಧರಿಸಿದೆ.

ಮಂಡ್ಯ ಅಭ್ಯರ್ಥಿಸ್ಟಾರ್ ಚಂದ್ರು ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಚುನಾವಣಾ ಇತಿಹಾಸದಲ್ಲಿ ಜನ ಎಂದೂ ಒಪ್ಪಿರಲಿಲ್ಲ. ಹೊರಗಿನಿಂದ ಬಂದವರಿಗೆ ಮಂಡ್ಯ ಜನ ಮತ ಹಾಕುವುದಿಲ್ಲ ಎಂದರು.

ಮೂರು ಬಾರಿ ಸಿಎಂ ಆದ ರಾಮನಗರವನ್ನು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಹಲವು ಸಂದರ್ಭಗಳಲ್ಲಿ ಹೇಳಿಕೊಂಡಿದ್ದರು. ಈಗ ರಾಮನಗರ ಬಿಟ್ಟು ಮಂಡ್ಯದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಮಂಡ್ಯದಿಂದ ಕುಮಾರಸ್ವಾಮಿ ಅಥವಾ ಅವರ ಮಗ ನಿಖಿಲ್ ಸ್ಪರ್ಧಿಸುತ್ತಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಚಂದ್ರು ಸ್ಥಳೀಯ ನಾಯಕರಾಗಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಹೊರಗಿನವರು ತಮ್ಮ ಭಾವನಾತ್ಮಕ ಹೇಳಿಕೆಗಳ ಮೂಲಕ ಮಂಡ್ಯದ ಜನರನ್ನು ನಿಯಂತ್ರಿಸಿದ ಘಟನೆಗಳಿಲ್ಲ. ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಗನಾಗಿರುವುದರಿಂದ ನಮಗೆ ಅವರ ಬಗ್ಗೆ ಗೌರವವಿದೆ. ಆದರೆ ಹೊರಗಿನವರು ಮಂಡ್ಯದ ಜನರನ್ನು ಭಾವನಾತ್ಮಕವಾಗಿ ಬ್ಲಾಕ್ ಮೇಲ್ ಮಾಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಾರೆ ಎಂದರು.

ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಂಡ್ಯದಿಂದ ಪಕ್ಷೇತರರಾಗಿ ಸ್ಪರ್ಧಿಸಿರುವ ಕುರಿತು ಮಾತನಾಡಿದ ಚಲುವರಾಯಸ್ವಾಮಿ, ಕಾಂಗ್ರೆಸ್‌ ಪಕ್ಷ ಯಾವತ್ತೂ ಪಕ್ಷೇತರರಾಗಿ ಸ್ಪರ್ಧಿಸುವಂತೆ ಹೇಳಿಲ್ಲ, ಅವರ ಜತೆ ಯಾವುದೇ ಚರ್ಚೆ ನಡೆಸಿಲ್ಲ. ಸ್ಪರ್ಧಿಸುವ ವಿಚಾರ ಅವರ ವೈಯಕ್ತಿಕ ನಿರ್ಧಾರಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT