ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ) 
ರಾಜಕೀಯ

ಭಿನ್ನಮತ ಶಮನಕ್ಕೆ BSY ಸಾರಥ್ಯ: ಬಂಡಾಯ ನಾಯಕರ ಮನವೊಲಿಕೆಗೆ ಸತತ ಯತ್ನ

ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಪರಿಹರಿಸಲು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಮುಂದಾಳತ್ವ ವಹಿಸಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಎದುರಾಗಿರುವ ಅಡೆತಡೆ ಹಾಗೂ ಸವಾಲುಗಳನ್ನು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಪರಿಹರಿಸಲು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಮುಂದಾಳತ್ವ ವಹಿಸಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಎದುರಾಗಿರುವ ಅಡೆತಡೆ ಹಾಗೂ ಸವಾಲುಗಳನ್ನು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ.

ಕಳೆದ ಒಂದು ವಾರದಿಂದ ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸತತವಾಗಿ ವಿವಿಧ ಕ್ಷೇತ್ರಗಳ ಮುಖಂಡರನ್ನ ಭೇಟಿ ಮಾಡುವ ಮೂಲಕ ಅವರ ಅಸಮಾಧಾನವನ್ನು ಆಲಿಸಿ ಬಗೆಹರಿಸುವ ಪ್ರಯತ್ನ ಮಾಡಿದರು.

ಸೋಮವಾರ ಟಿಕೆಟ್ ವಂಚಿತ ಕೊಪ್ಪಳ ಕ್ಷೇತ್ರದ ಹಾಲಿ ಸಂಸದ ಕರಡಿ ಸಂಗಣ್ಮ ಸೇರಿದಂತೆ ಕ್ಷೇತ್ರದ ಮುಖಂಡರೊಂದಿಗೆ ಸುದೀರ್ಘ ಸಭೆ ನಡೆಸಿ ಅಸಮಾಧಾನ ಶಮನಗೊಳಿಸಿದರು. ಕಾಂಗ್ರೆಸ್ ನತ್ತ ಮುಖ ಮಾಡಿದ್ದ ಕರಡಿ ಸಂಗಣ್ಣ ಅವರನ್ನು ಪಕ್ಷದಲ್ಲೇ ಉಳಿಯುವಂತೆ ಮಾಡಿದರು.

ಇದಕ್ಕೂ ಮೊದಲು ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹಾಗೂ ಕೆಆರ್'ಪಿಪಿ ಪಕ್ಷ ಸ್ಥಾಪಿಸಿದ್ದ ಗಾಲಿ ಜನಾರ್ಧನ ರೆಡ್ಡಿಯವರನ್ನು ಪಕ್ಷಕ್ಕೆ ತರುವಲ್ಲಿ ಯಡಿಯೂರಪ್ಪ ಪಾತ್ರ ಮಹತ್ವದ್ದಾಗಿತ್ತು.

ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನೂ ಪರಿಹರಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಅತೃಪ್ತರ ಜೊತೆ ಯಡಿಯೂರಪ್ಪ ಮಂಗಳವಾರ ನಡೆಸಿದ ಸಂಧಾನ ಮಾತುಕತೆ ಶಸ್ವಿಯಾಗಿದ್ದು, ದಾವಣಗೆರೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ.

ಸೋಮಣ್ಣ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಅವರನ್ನು ಭೇಟಿ ಮಾಡಲು ಯಡಿಯೂರಪ್ಪ ಕಳೆದ ವಾರ ತುಮಕೂರಿಗೆ ಭೇಟಿ ನೀಡಿದ್ದರು.

ಇಂದು ಬೆಳಗಾವಿಗೆ ಯಡಿಯೂರಪ್ಪ

ಭಿನ್ನಮತ ಶಮನ ಪ್ರಯತ್ನ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಇಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಯಡಿಯೂರಪ್ಪ ಅವರು, "ನಾನು ಇಂದು ದಾವಣಗೆರೆಗೆ ಮತ್ತು ನಾಳೆ ಬೆಳಗಾವಿಗೆ ಹೋಗುತ್ತಿದ್ದೇನೆ. ಅಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಕುಳಿತು ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಪಕ್ಷದಲ್ಲಿ ಯಾವುದೇ ತೊಡಕುಗಳಿಲ್ಲ ಎಂದು ಹೇಳಿದರು.

ಎಲ್ಲಾ 28 ಸ್ಥಾನಗಳನ್ನು ಗೆಲ್ಲಬೇಕು ಎಂಬುದು ನಮ್ಮ ನಿರೀಕ್ಷೆಯಾಗಿದ್ದು, ಅದಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ, ಈ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT