ಗೋಕರ್ಣ ಆತ್ಮಲಿಂಗಕ್ಕೆ ಡಿ ಕೆ ಶಿವಕುಮಾರ್ ಪೂಜೆ  
ರಾಜಕೀಯ

ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ: ಗೋಕರ್ಣ ಅರ್ಚಕರ ಸಂಕಲ್ಪ, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದ ಡಿಸಿಎಂ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ನಿನ್ನೆ ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಗೋಕರ್ಣ(ಉತ್ತರ ಕನ್ನಡ):ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ನಿನ್ನೆ ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ‌‌. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದರು. ಈ ಬಗ್ಗೆ ದೇವಸ್ಥಾನದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ‌.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಗೋಕರ್ಣ ಆತ್ಮಲಿಂಗ ಪೂಜೆ ವೇಳೆ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಅರ್ಚಕರು ಸಂಕಲ್ಪ ಮಾಡಿಕೊಂಡಿದ್ದಾರೆ. ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನು ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನು ತಪ್ಪಿಸಲು ಸಾಧ್ಯವೇ, ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್‌ ಆಕ್ರೋಶ

'ಇರಾನ್ ಸಂಪೂರ್ಣ ಮಣಿದಿದೆ', 'ನಮಗೆ ಬೇಕಿದ್ದ ಬಹುತೇಕ ಎಲ್ಲ ಷರತ್ತುಗಳಿಗೆ ಒಪ್ಪಿದೆ': ಟ್ರಂಪ್‌ ಮಹತ್ವದ ಹೇಳಿಕೆ

ಜುಲೈ 4ರಿಂದ ಅಲಿ ಖಮೇನಿ ಅಂತಿಮ ವಿಧಿವಿಧಾನ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ, ಭದ್ರತಾ ಕಾರಣಕ್ಕೆ ಪುತ್ರ ಮೊಜ್ತಬಾ ಗೈರು..!