ದಿಂಗಾಲೇಶ್ವರ ಸ್ವಾಮೀಜಿ-ಪ್ರಹ್ಲಾದ್ ಜೋಶಿ 
ರಾಜಕೀಯ

ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ? ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು!

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ.

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ. ಧಾರವಾಡದಿಂದ ಸ್ವಾಮೀಜಿಯೊಬ್ಬರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದರಿಂದ ಲಿಂಗಾಯತ ಮತಗಳು ವಿಭಜನೆಯಾಗಿ ಪ್ರಹ್ಲಾದ್‌ ಜೋಶಿ ಗೆಲುವು ಕಷ್ಟ ಆಗಬಹುದು ಎನ್ನಲಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುವ ನಿರೀಕ್ಷೆಯಿದೆ, 5.5 ಲಕ್ಷ ಲಿಂಗಾಯತರಲ್ಲಿ ಸಣ್ಣ ಶೇಕಡಾವಾರು ಜನರು ಅವರಿಗೆ ಮತ ಹಾಕಿದರೂ, ಲಿಂಗಾಯತರು ಈ ಹಿಂದೆ ಬಿಜೆಪಿಗೆ ಹೆಚ್ಚಾಗಿ ಮತ ಚಲಾಯಿಸಿದ್ದರಿಂದ ಜೋಶಿಗೆ ಈ ಬಾರಿ ತೊಂದರೆಯಾಗಬಹುದು.

ಧಾರವಾಡ ಭಾಗದಿಂದ ನಾಲ್ಕು ಬಾರಿ ಸಂಸದರಾಗಿರುವ ಜೋಶಿ ಅವರು ಕರ್ನಾಟಕದ ಪ್ರಭಾವಿ ನಾಯಕರಾಗಿದ್ದು, ಪ್ರಸ್ತುತ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿದ್ದಾರೆ. ಇತ್ತೀಚಿನ ಬೆಳವಣಿಗೆಯ ಬಗ್ಗೆ ನಮಗೆ ತಿಳಿದಿದೆ ಮತ್ತು ಧಾರವಾಡದಿಂದ ಯಾವುದೇ ಲಿಂಗಾಯತ ಸ್ಪರ್ಧಿಸಲು ನಾವು ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ದಿಂಗಾಲೇಶ್ವರ ಸ್ವಾಮೀಜಿ ಬುಧವಾರ ಬೆಳಿಗ್ಗೆ ತಮ್ಮ ಮಠದಲ್ಲಿ ಮಠಾಧೀಶರ ಸಭೆಗೆ ಕರೆದಿದ್ದು, ಅಲ್ಲಿ ತಮ್ಮ ಸ್ಪರ್ಧೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ. ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಸಂಪರ್ಕಿಸಿದಾಗ, ತಮ್ಮ ಸ್ಪರ್ಧೆ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.

ಧಾರವಾಡ ಕ್ಷೇತ್ರದಿಂದ ಕುರುಬ ಜನಾಂಗದ ವಿನೋದ ಅಸೂಟಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ದಿಂಗಾಲೇಶ್ವರ ಸ್ವಾಮೀಜಿ ಅವರು ಬುದ್ದಿವಂತರಾಗಿದ್ದು, ಅಪಾರವಾದ ವಾಕ್ಚಾತುರ್ಯವನ್ನು ಹೊಂದಿದ್ದು, ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಕ್ಷೇತ್ರವು 5.5 ಲಕ್ಷ ಲಿಂಗಾಯತರು, 3.5 ಲಕ್ಷ ಮುಸ್ಲಿಮರು, 2.7 ಲಕ್ಷ ಎಸ್‌ಸಿಗಳು ಮತ್ತು 2 ಲಕ್ಷ ಕುರುಬ ಮತದಾರರಿದ್ದಾರೆ. ಲಿಂಗಾಯತರಾದ ವಿನಯ್ ಕುಲಕರ್ಣಿ ಸ್ಪರ್ಧಿಸಿದಾಗಲೂ ಲಿಂಗಾಯತರು ಬ್ರಾಹ್ಮಣರಾದ ಜೋಶಿ ಅವರನ್ನು ಬೆಂಬಲಿಸಿದ್ದರು.

ನಾವು ವಿಚಲಿತರಾಗಿಲ್ಲ. ನಮ್ಮ ನಾಯಕರಾದ ಪ್ರಲ್ಹಾದ ಜೋಶಿಯವರು ಧಾರವಾಡದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಳೆದ ಬಾರಿ 2.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದು, ಯಾವುದೇ ಅಭ್ಯರ್ಥಿಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಲಿಂಗಾಯತರು ಸಂಪೂರ್ಣವಾಗಿ ಜೋಶಿ ಅವರಿಗೆ ಮತ ಹಾಕದಿದ್ದರೆ ಬಿಜೆಪಿಗೆ ಸಮಸ್ಯೆಯಾಗಬಹುದು ಎಂದು ರಾಜಕೀಯ ಪಂಡಿತರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT