ಬಿ.ಎಸ್. ಯಡಿಯೂರಪ್ಪ 
ರಾಜಕೀಯ

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ

ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯಿದೆ.

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಆದರೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಸೇರಿ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಗೆಲ್ಲುತ್ತದೆ. ಎಲ್ಲಿಯೂ ಅಸಮಾಧಾನ ಆತಂಕ ಏನೂ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಜಗದೀಶ್ ಶೆಟ್ಟರ್ ಅವರು ತುಂಬಾ ಒಳ್ಳೆಯ ನಾಯಕರಾಗಿದ್ದರಿಂದ ಅವರನ್ನು ನಾವು ಒತ್ತಾಯಿಸಿ ವಾಪಸ್ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿ ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರವನ್ನು ಟೀಕಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಪ್ರಧಾನಿಯನ್ನು ಟೀಕಿಸುವ ಮೊದಲು ಸಿಎಂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು. 'ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ದೊಡ್ಡ ನಾಯಕರಾಗುತ್ತಾರೆ ಎಂದು ಯೋಚಿಸುತ್ತಿರಬಹುದು. ಕೇಂದ್ರದಿಂದ ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ ನಂತರವೂ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂಬ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಎಸ್‌ ಯಡಿಯೂರಪ್ಪ ಕಿಡಿಕಾರಿದ್ದಾರೆ. ಸಚಿವ ಶಿವರಾಜ್ ತಂಗಡಗಿಗೆ ಈ ಹೇಳಿಕೆ ಶೋಭೆ ತರಲ್ಲ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಇಡೀ ವಿಶ್ವವೇ ಪ್ರಧಾನಿ ಮೋದಿ ಅವರನ್ನು ಗೌರವದಿಂದ ನೋಡುತ್ತಿದೆ. ತಂಗಡಗಿ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT