ಸಚಿವ ಪ್ರಿಯಾಂಕ್ ಖರ್ಗೆ  
ರಾಜಕೀಯ

ದಕ್ಷಿಣ ಭಾರತದಲ್ಲಿ ಮೋದಿ ಅಲೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

ಕಲಬುರಗಿ: ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ‘ಮೋದಿ ಸುನಾಮಿ’ ಇದ್ದಿದ್ದರೆ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಏಕೆ ಮೈತ್ರಿ ಮಾಡಿಕೊಂಡಿತು? ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದು ಏನನ್ನು ತೋರಿಸುತ್ತದೆ?...ಟಿವಿ ಪರದೆಗಳಲ್ಲಿ ‘ಮೋದಿ ಗ್ಯಾರಂಟಿ’ ಬರುತ್ತಿದೆ. ಆದರೆ ಕಾಂಗ್ರೆಸ್ ‘ಗ್ಯಾರಂಟಿ’ ಈಗಾಗಲೇ ಜನರನ್ನು ತಲುಪಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲ ‘ಶ್ಯಾಡೋ ಸಿಎಂ’ ಎಂಬ ಹೇಳಿಕೆ ನೀಡುವುದು ಮೋದಿಯವರಿಗೆ ಅಭ್ಯಾಸವಾಗಿ ಹೋಗಿದೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಕರ್ನಾಟಕದ ಉಪಮುಖ್ಯಮಂತ್ರಿ ಎಂಬುದನ್ನು ಏಕೆ ಮರೆಯುತ್ತಿದ್ದಾರೆ ಎಂಬುದು ತಿಳಿದಿಲ್ಲ ಎಂದು ತಿಳಿಸಿದರು.

ಬಿವೈ ವಿಜಯೇಂದ್ರ ನಾಯಕತ್ವವನ್ನು ಬಿಜೆಪಿ ಕಾರ್ಯಕರ್ತರು ಒಪ್ಪಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿಯಲ್ಲಿ ಹೆಚ್ಚು ವಂಶಾಡಳಿತ ರಾಜಕೀಯವಿದೆ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಕ್ಷೇತ್ರದಲ್ಲಿಯೇ 'ಗೋ ಬ್ಯಾಕ್' ಅಭಿಯಾನ ಶೀಘ್ರದಲ್ಲೇ ಶುರುವಾಗಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?