ಸಚಿವ ಪ್ರಿಯಾಂಕ್ ಖರ್ಗೆ  
ರಾಜಕೀಯ

ದಕ್ಷಿಣ ಭಾರತದಲ್ಲಿ ಮೋದಿ ಅಲೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

ಕಲಬುರಗಿ: ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ‘ಮೋದಿ ಸುನಾಮಿ’ ಇದ್ದಿದ್ದರೆ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಏಕೆ ಮೈತ್ರಿ ಮಾಡಿಕೊಂಡಿತು? ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದು ಏನನ್ನು ತೋರಿಸುತ್ತದೆ?...ಟಿವಿ ಪರದೆಗಳಲ್ಲಿ ‘ಮೋದಿ ಗ್ಯಾರಂಟಿ’ ಬರುತ್ತಿದೆ. ಆದರೆ ಕಾಂಗ್ರೆಸ್ ‘ಗ್ಯಾರಂಟಿ’ ಈಗಾಗಲೇ ಜನರನ್ನು ತಲುಪಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲ ‘ಶ್ಯಾಡೋ ಸಿಎಂ’ ಎಂಬ ಹೇಳಿಕೆ ನೀಡುವುದು ಮೋದಿಯವರಿಗೆ ಅಭ್ಯಾಸವಾಗಿ ಹೋಗಿದೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಕರ್ನಾಟಕದ ಉಪಮುಖ್ಯಮಂತ್ರಿ ಎಂಬುದನ್ನು ಏಕೆ ಮರೆಯುತ್ತಿದ್ದಾರೆ ಎಂಬುದು ತಿಳಿದಿಲ್ಲ ಎಂದು ತಿಳಿಸಿದರು.

ಬಿವೈ ವಿಜಯೇಂದ್ರ ನಾಯಕತ್ವವನ್ನು ಬಿಜೆಪಿ ಕಾರ್ಯಕರ್ತರು ಒಪ್ಪಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿಯಲ್ಲಿ ಹೆಚ್ಚು ವಂಶಾಡಳಿತ ರಾಜಕೀಯವಿದೆ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಕ್ಷೇತ್ರದಲ್ಲಿಯೇ 'ಗೋ ಬ್ಯಾಕ್' ಅಭಿಯಾನ ಶೀಘ್ರದಲ್ಲೇ ಶುರುವಾಗಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT