ಆರ್ ಎಂಪಿ ನಾಯಕರಾದ ಗಾಯಕ್ ವಾಡ್ ಮತ್ತಿತರರು 
ರಾಜಕೀಯ

ಲೋಕಸಭಾ ಚುನಾವಣೆ: ರಾಜ್ಯದ 10 ಕ್ಷೇತ್ರಗಳಲ್ಲಿ RMP ಅಭ್ಯರ್ಥಿಗಳು ಕಣಕ್ಕೆ!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ 10 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮರಾಠ ಪಕ್ಷ (ಆರ್‌ಎಂಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ 10 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮರಾಠ ಪಕ್ಷ (ಆರ್‌ಎಂಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಆರ್‌ಎಂಪಿಯ ಶ್ಯಾಂಸುಂದರ್ ಗಾಯಕವಾಡ್, ಬೆಳಗಾವಿ ಕ್ಷೇತ್ರದ ಆರ್‌ಎಂಪಿ ಅಭ್ಯರ್ಥಿಯಾಗಿ ವಕೀಲ ಈಶ್ವರ ರುದ್ರಪ್ಪ ಘಾಡಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಗಾಯಕ್ ವಾಡ್ ಅವರು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಜಿ ಡಿ ಘೋರ್ಪಡೆ, ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ನಾರಾಯಣರಾವ್ ಗಾಯಕವಾಡ, ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ವಿನೋದ ಸಾಳುಂಕೆ, ಬೀದರ್ ಲೋಕಸಭೆ ಕ್ಷೇತ್ರಕ್ಕೆ ವಿಜಯಕುಮಾರ ಪಟೇಲ್, ಬಾಗಲಕೋತ ಮುಧೋಳಕ್ಕೆ ಶ್ರೀಕಾಂತ್ ಸಭಾ ಕ್ಷೇತ್ರ, ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೇವರಾಜ್ ಶಿಂಧೆ ಸ್ಪರ್ಧಿಸಲಿದ್ದಾರೆ.

ವಿಜಯಪುರ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಶ್ಯಾಂ ಸುಂದರ್ ಗಾಯಕ್ ವಾಡ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT