ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು 
ರಾಜಕೀಯ

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಬಿಜೆಪಿಗೆ ಭಾರೀ ಸವಾಲು: ಭಿನ್ನಮತಕ್ಕೆ ಮದ್ದರೆಯುವರೇ ಕೇಸರಿ ಕಲಿಗಳು!

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರನ್ನು ಬದಲಾಯಿಸಿರುವ ಬಿಜೆಪಿಗೆ ಹಲವಾರು ಸವಾಲುಗಳು ಎದುರಾಗಿವೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರನ್ನು ಬದಲಾಯಿಸಿರುವ ಬಿಜೆಪಿಗೆ ಹಲವಾರು ಸವಾಲುಗಳು ಎದುರಾಗಿವೆ. ಇದರ ನಡುವೆ ಶುಕ್ರವಾರ ಬೆಂಗಳೂರಿನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ.

ಒಂದೆಡೆ ಟಿಕೆಟ್ ನೀಡದಿದ್ದಕ್ಕೆ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಕೊತ ಕೊತ ಕುದಿಯುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಹಿರಿಯ ನಾಯಕರು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಮೈಸೂರು-ಕೊಡಗು, ಬೆಂಗಳೂರು ಉತ್ತರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಭಿನ್ನಮತ ಬಹುತೇಕ ಶಮನವಾಗಿದೆ, ಆದರೆ ಉತ್ತರ ಕನ್ನಡ, ಚಿತ್ರದುರ್ಗ ಮತ್ತು ರಾಯಚೂರಿನಲ್ಲಿ ಪಕ್ಷಕ್ಕೆ ಭಾರೀ ಸವಾಲು ಎದುರಾಗಿದೆ.

25 ಬಿಜೆಪಿ ಅಭ್ಯರ್ಥಿಗಳಲ್ಲಿ ಒಂಬತ್ತು ಮಂದಿ ಲಿಂಗಾಯತರು, ನಾಲ್ವರು ಎಸ್‌ಸಿಗಳು, ಮೂವರು ಬ್ರಾಹ್ಮಣರು, ಮೂವರು ಒಕ್ಕಲಿಗರು, ಇಬ್ಬರು ಎಸ್‌ಟಿ, ಒಬ್ಬರು ಬಂಟ್ ಮತ್ತು ಮೂವರು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಒಂಬತ್ತು ಲಿಂಗಾಯತರಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ, ಒಕ್ಕಲಿಗ ಸಂಘದ ಸದಸ್ಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕರ ಪ್ರಕಾರ, ಜೆಡಿಎಸ್ ಕೂಡ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ, ಇದರಿಂದ ಒಕ್ಕಲಿಗ ಸಮುದಾಯದ ಸಂಖ್ಯೆ ಐದಕ್ಕೆ ಏರಿದೆ, ಅದು ಕಡಿಮೆ ಪ್ರಾತಿನಿಧ್ಯವಲ್ಲ. ಹಳೇ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಡಿವಿ ಸದಾನಂದಗೌಡ ಹಾಗೂ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಒಕ್ಕಲಿಗ ಪ್ರಾತಿನಿಧ್ಯದ ಬಗ್ಗೆ ಕೆಲ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷವು ಈ ಬಾರಿ 15 ಹೊಸ ಮುಖಗಳನ್ನು ಕಣಕ್ಕಿಳಿಸಿದೆ, ಅದರಲ್ಲಿ ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿತ್ರದುರ್ಗದಿಂದ ಗೋವಿಂದ ಕಾರಜೋಳ ಮತ್ತು ತುಮಕೂರಿನಿಂದ ವಿ ಸೋಮಣ್ಣ ಅವರಂತಹ ಕೆಲವರು ರಾಜ್ಯದಲ್ಲಿ ಯುದ್ಧ ಕುದುರೆಯಾಗಿದ್ದಾರೆ. ಮೂವರೂ ಹಿರಿಯ ನಾಯಕರನ್ನು ಅವರವರ ಕ್ಷೇತ್ರಗಳಲ್ಲಿ ‘ಹೊರಗಿನವರು’ ಎಂದು ಪರಿಗಣಿಸಲಾಗಿದ್ದು, ಪಕ್ಷವು ಹೊರಗಿನವರನ್ನು ಕಣಕ್ಕಿಳಿಸುತ್ತಿರುವುದಕ್ಕೆ ಸ್ಥಳೀಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ.

ಅವರು ‘ಹೊರಗಿನವರು’ ಅಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ. ಶೆಟ್ಟರ್ ಮತ್ತು ಸೋಮಣ್ಣ ಅಕ್ಕಪಕ್ಕದ ಕ್ಷೇತ್ರದವರು, ಕಾರಜೋಳ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ. ಇವರೆಲ್ಲರೂ ಕರ್ನಾಟಕದವರು ಮತ್ತು ಭಾಷೆ ಮತ್ತು ಸಂಸ್ಕೃತಿಯನ್ನು ತಿಳಿದಿದ್ದಾರೆ. ಇದು ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು.

ಬಿಜೆಪಿಯ ಪ್ರಮುಖ ಸವಾಲು ಎಂದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ವಾಸ್ತವವಾಗಿ ದೊಡ್ಡ ಸವಾಲು, ಒಂದು ವರ್ಷದ ಹಿಂದೆ, ಎರಡೂ ಪಕ್ಷಗಳು ಸದನದ ಒಳಗೆ ಮತ್ತು ಹೊರಗೆ ಪರಸ್ಪರ ವಿರುದ್ಧವಾಗಿ ಕೆಲಸ ಮಾಡುತ್ತಿದ್ದವು.

ಅವರು 2023 ರಲ್ಲಿ ಪರಸ್ಪರರ ವಿರುದ್ಧ ಸ್ಪರ್ಧಿಸಿದರು, ಈಗ ಒಂದು ವರ್ಷದೊಳಗೆ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದು ಸುಲಭವಲ್ಲ. ಉನ್ನತ ನಾಯಕರು ಕೈ ಜೋಡಿಸುವಷ್ಟು ತಳಮಟ್ಟದಲ್ಲಿ ಬೇರೆ ಬೇರೆ ಪಕ್ಷಗಳಿಂದ ಬಂದವರು ಒಂದಾಗುವುದು ಸುಲಭವಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಳ್ಳಲಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿಗಳು

ಬಸವರಾಜ ಬೊಮ್ಮಾಯಿ (ಹಾವೇರಿ), ವಿ ಸೋಮಣ್ಣ (ತುಮಕೂರು), ಬಿ ಶ್ರೀರಾಮುಲು (ಬಳ್ಳಾರಿ), ಕೋಟ ಶ್ರೀನಿವಾಸ್ ಪೂಜಾರಿ (ಉಡುಪಿ-ಚಿಕ್ಕಮಗಳೂರು), ಪಿಸಿ ಮೋಹನ್ (ಬೆಂಗಳೂರು ಸೆಂಟ್ರಲ್), ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ), ಶೋಭಾ ಕರಂದ್ಲಾಜೆ (ಬೆಂಗಳೂರು ಉತ್ತರ), ಪಿಸಿ ಗದ್ದಿಗೌಡರ್ (ಬಾಗಲಕೋಟ), ಅಣ್ಣಾಸಾಹೇಬ ಜೊಲ್ಲೆ (ಚಿಕ್ಕೋಡಿ), ಬಿ.ವೈ.ರಾಘವೇಂದ್ರ (ಶಿವಮೊಗ್ಗ), ಡಾ.ಉಮೇಶ ಜಾದವ್ (ಗುಲ್ಬರ್ಗ), ರಮೇಶ್ ಜಿಗಜಿಣಗಿ (ವಿಜಯಪುರ), ಡಾ.ಬಸವರಾಜ ಕ್ಯಾವಟೋರ್ (ಕೊಪ್ಪಳ), ಡಾ.ಸಿ.ಎನ್.ಮಂಜುನಾಥ್ (ಬೆಂಗಳೂರು ಗ್ರಾಮಾಂತರ), ಎಸ್.ಬಾಲಾಜಿ (ಚಾಮರಾಜನಗರ) , ಗಾಯತ್ರಿ ಸಿದ್ದೇಶ್ವರ (ದಾವಣಗೆರೆ), ಭಗವಂತ ಖೂಬಾ (ಬೀದರ್), ಪ್ರಲ್ಹಾದ್ ಜೋಶಿ (ಹುಬ್ಬಳ್ಳಿ), ಕ್ಯಾಪ್ಟನ್ ಬ್ರಿಜೇಶ್ ಚೌಟ (ದಕ್ಷಿಣ ಕನ್ನಡ), ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಮೈಸೂರು-ಕೊಡಗು), ವಿಶ್ವೇಶ್ವರ ಹೆಗಡೆ ಕಾಗೇರಿ (ಉತ್ತರಕರ ಕನ್ನಡ), ಡಾ. , ಗೋವಿಂದ್ ಕಾರಜೋಳ್ (ಚಿತ್ರದುರ್ಗ), ರಾಜಾ ಅಮರೇಶ್ವರ ನಾಯ್ಕ್ (ರಾಯಚೂರು) ಮತ್ತು ಜಗದೀಶ್ ಶೆಟ್ಟರ್ (ಬೆಳಗಾವಿ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT