ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇರುವುದು. 
ರಾಜಕೀಯ

ಜೆಡಿಎಸ್ ಜೊತೆಗಿನ ಮೈತ್ರಿಯೊಂದಿಗೆ ಬಿಜೆಪಿ ಬಲಿಷ್ಠವಾಗಿದೆ: MLC ಎಂ.ಕೆ.ಪ್ರಾಣೇಶ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶುಕ್ರವಾರ ಹೇಳಿದೆ.

ಚಿಕ್ಕಮಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶುಕ್ರವಾರ ಹೇಳಿದೆ.

ಎಂಎಲ್‌ಸಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಎರಡು ಪಕ್ಷಗಳ ನಡುವಿನ ಅಸಮಾಧಾನಗಳ ಬಗೆಹರಿಸಲು ಹಲವು ಸುತ್ತಿನ ಮಾತುಕತೆ ಹಾಗೂ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಮಾತನಾಡಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಪರ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ಮುಖಂಡರೊಂದಿಗೆ ಒಗ್ಗಟ್ಟಿನಿಂದ ಭಾಗಿಯಾಗಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಪ್ರಸ್ತುತ ಎದುರಾಗಿದ್ದ ಗೊಂದಲಗಳನ್ನು ನಿವಾರಿಸಲಾಗಿದ್ದು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪೂಜಾರಿ ಅವರನ್ನು ಬೆಂಬಲಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ತಾ.ಪಂ ಮತ್ತು ಜಿಪಂ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ಮೈತ್ರಿಯ ಯಶಸ್ಸನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಆದರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಕಷ್ಟ. ಇದು ದೇಶದ ಜಾತ್ಯತೀತ ರಚನೆಗೆ ವಿರುದ್ಧವಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ,

ಈ ನಡುವೆ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಯ ಬಲ ಬಂದಿದ್ದು, ಲೋಕಸಭೆ ಚುನಾವಣೆಯಲ್ಲಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ ಎಂಬ ಪ್ರಾಣೇಶ್ ಅವರ ಮಾತು ನಿಜವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!