ಸಹಕಾರಿ ಇಲಾಖೆ ಸಚಿವ ಕೆ ಎನ್ ರಾಜಣ್ಣ  
ರಾಜಕೀಯ

ಹಾಸನ ಜಿಲ್ಲಾಧಿಕಾರಿ ವಿರುದ್ಧ ದೇವೇಗೌಡರ ಆರೋಪ ನಿರಾಧಾರ: ಸಚಿವ ರಾಜಣ್ಣ

ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಡಿರುವ ಆರೋಪ ನಿರಾಧಾರ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಶುಕ್ರವಾರ ಹೇಳಿದ್ದಾರೆ.

ಹಾಸನ: ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಡಿರುವ ಆರೋಪ ನಿರಾಧಾರ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಶುಕ್ರವಾರ ಹೇಳಿದ್ದಾರೆ.

ಅರಸೀಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜಣ್ಣ, ದೇವಗೌಡ ಅವರು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಯ ವಿರುದ್ಧ ದೂರು ನೀಡಬಹುದು, ಆದರೆ, ಆ ದೂರು ನಿಜವಾಗಿರಬೇಕು. ಸುಳ್ಳು ಆರೋಪ ಹೊರಿಸಿ ಹಿರಿಯ ಅಧಿಕಾರಿಗಳ ವರ್ಚಸ್ಸು ಹಾಳು ಮಾಡುವ ಅಭ್ಯಾಸ ದೇವೇಗೌಡ ಅವರಿಗಿದೆ ಎಂದು ಹೇಳಿದರು.

ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಯಾವುದೇ ಜಿಲ್ಲಾಧಿಕಾರಿಯ ಕರ್ತವ್ಯವಾಗಿದೆ. ಸತ್ಯಭಾಮಾ ಕೂಡ ಅದನ್ನೇ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಇದೇ ವೇಳೆ ಪ್ರಶ್ನಿಸಿದರು.

ದೇವೇಗೌಡ ಅವರು ಅವಕಾಶವಾದಿ ರಾಜಕಾರಣಿಯಾಗುತ್ತಿದ್ದಾರೆ, 2019ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದರು. ಕೇವಲ 3 ಸ್ಥಾನಕ್ಕಾಗಿ ದೇವೇಗೌಡ ಅವರು ತಮ್ಮ ಜಾತ್ಯಾತೀತತೆ ವಿಚಾರದಲ್ಲಿ ರಾಜಿ ಮಾಡಿಕೊಂಡಿರುವುದು ದುರಾದೃಷ್ಟಕರ ಸಂಗತಿ ಎದು ತಿಳಿಸಿದರು.

ದೇವೇಗೌಡ ಅವರ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬಾರದು, ಏಕೆಂದರೆ ಸತ್ಯಭಾಮಾ ಸಾಮಾನ್ಯ ಜನರ ಹಿತಾಸಕ್ತಿಗಾಗಿ ಕೆಲಸ ಮಾಡುವ ಪ್ರಾಮಾಣಿಕ ಅಧಿಕಾರಿಯಾಗಿದ್ದಾರೆ ಎಂದು ತಿಳಿಸಿದರು.

ಬಳಿಕ ಜೆಡಿಎಸ್ ಅಭ್ಯರ್ಥಿ ಪರ ಪ್ರೀತಂ ಗೌಡ ಪ್ರಚಾರ ಕುರಿತ ಪ್ರಶ್ನಗೆ ಉತ್ತರಿಸಿ, ಈ ಚುನಾವಣೆ ಪ್ರೀತಂ ಅವರಿಗೂ ಕೂಡ ಮಹತ್ವದ್ದಾಗಿದ್ದು, ಪ್ರಚಾರ ಕುರಿತು ಪ್ರೀತಂ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾದು ನೋಡೋಣ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT