ಸಹಕಾರಿ ಇಲಾಖೆ ಸಚಿವ ಕೆ ಎನ್ ರಾಜಣ್ಣ  
ರಾಜಕೀಯ

ಹಾಸನ ಜಿಲ್ಲಾಧಿಕಾರಿ ವಿರುದ್ಧ ದೇವೇಗೌಡರ ಆರೋಪ ನಿರಾಧಾರ: ಸಚಿವ ರಾಜಣ್ಣ

ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಡಿರುವ ಆರೋಪ ನಿರಾಧಾರ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಶುಕ್ರವಾರ ಹೇಳಿದ್ದಾರೆ.

ಹಾಸನ: ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಡಿರುವ ಆರೋಪ ನಿರಾಧಾರ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಶುಕ್ರವಾರ ಹೇಳಿದ್ದಾರೆ.

ಅರಸೀಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜಣ್ಣ, ದೇವಗೌಡ ಅವರು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಯ ವಿರುದ್ಧ ದೂರು ನೀಡಬಹುದು, ಆದರೆ, ಆ ದೂರು ನಿಜವಾಗಿರಬೇಕು. ಸುಳ್ಳು ಆರೋಪ ಹೊರಿಸಿ ಹಿರಿಯ ಅಧಿಕಾರಿಗಳ ವರ್ಚಸ್ಸು ಹಾಳು ಮಾಡುವ ಅಭ್ಯಾಸ ದೇವೇಗೌಡ ಅವರಿಗಿದೆ ಎಂದು ಹೇಳಿದರು.

ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಯಾವುದೇ ಜಿಲ್ಲಾಧಿಕಾರಿಯ ಕರ್ತವ್ಯವಾಗಿದೆ. ಸತ್ಯಭಾಮಾ ಕೂಡ ಅದನ್ನೇ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಇದೇ ವೇಳೆ ಪ್ರಶ್ನಿಸಿದರು.

ದೇವೇಗೌಡ ಅವರು ಅವಕಾಶವಾದಿ ರಾಜಕಾರಣಿಯಾಗುತ್ತಿದ್ದಾರೆ, 2019ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದರು. ಕೇವಲ 3 ಸ್ಥಾನಕ್ಕಾಗಿ ದೇವೇಗೌಡ ಅವರು ತಮ್ಮ ಜಾತ್ಯಾತೀತತೆ ವಿಚಾರದಲ್ಲಿ ರಾಜಿ ಮಾಡಿಕೊಂಡಿರುವುದು ದುರಾದೃಷ್ಟಕರ ಸಂಗತಿ ಎದು ತಿಳಿಸಿದರು.

ದೇವೇಗೌಡ ಅವರ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬಾರದು, ಏಕೆಂದರೆ ಸತ್ಯಭಾಮಾ ಸಾಮಾನ್ಯ ಜನರ ಹಿತಾಸಕ್ತಿಗಾಗಿ ಕೆಲಸ ಮಾಡುವ ಪ್ರಾಮಾಣಿಕ ಅಧಿಕಾರಿಯಾಗಿದ್ದಾರೆ ಎಂದು ತಿಳಿಸಿದರು.

ಬಳಿಕ ಜೆಡಿಎಸ್ ಅಭ್ಯರ್ಥಿ ಪರ ಪ್ರೀತಂ ಗೌಡ ಪ್ರಚಾರ ಕುರಿತ ಪ್ರಶ್ನಗೆ ಉತ್ತರಿಸಿ, ಈ ಚುನಾವಣೆ ಪ್ರೀತಂ ಅವರಿಗೂ ಕೂಡ ಮಹತ್ವದ್ದಾಗಿದ್ದು, ಪ್ರಚಾರ ಕುರಿತು ಪ್ರೀತಂ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾದು ನೋಡೋಣ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT