ವೀಣಾ ಕಾಶಪ್ಪನವರ್
ವೀಣಾ ಕಾಶಪ್ಪನವರ್  
ರಾಜಕೀಯ

Lok Sabha election 2024: ಬಾಗಲಕೋಟೆ ಲೋಕಸಭಾ ಕ್ಷೇತ್ರ; ವೀಣಾ ಕಾಶಪ್ಪನವರ ಮುಂದಿನ ನಡೆಯೇನು?

Sumana Upadhyaya

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನಿರಾಕರಣೆ ವಿಚಾರವಾಗಿ ನೊಂದಿರುವ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆದಿದ್ದ ಸಭೆಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌(TNIE)ಯೊಂದಿಗೆ ಮಾತನಾಡಿದ ಅವರು, ಮೊನ್ನೆ ಗುರುವಾರ ಬೆಂಗಳೂರಿನಲ್ಲಿ ಟಿಕೆಟ್ ಹಂಚಿಕೆ ಕುರಿತು ಗೊಂದಲವನ್ನು ಕೊನೆಗೊಳಿಸಲು ಕರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಇತರ ನಾಯಕರ ಸಭೆಯಿಂದ ವೀಣಾ ಕಾಶಪ್ಪನವರು ಸಮಾಧಾನಗೊಂಡಿಲ್ಲ. ಇದರಿಂದ ಅಸಂತೃಪ್ತಗೊಂಡಿರುವ ವೀಣಾ ಕಾಶಪ್ಪನವರು ತಟಸ್ಥವಾಗಿರಲು ನಿರ್ಧರಿಸಿದ್ದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಬೇಡವೇ ಎಂದು ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಒಂದೆರಡು ದಿನಗಳಲ್ಲಿ ನಾನು ನನ್ನ ಬೆಂಬಲಿಗರ ಸಭೆಯನ್ನು ಕರೆಯುತ್ತೇನೆ. ನನ್ನ ಮುಂದಿನ ಕ್ರಮದ ಬಗ್ಗೆ ಅವರ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತೇನೆ. ಸಭೆಯ ಫಲಿತಾಂಶದ ಆಧಾರದ ಮೇಲೆ, ನಾನು ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುತ್ತೇನೆ, ಆದರೆ ಪ್ರಸ್ತುತ ನಾನು ನನ್ನ ನಿಲುವಿನಲ್ಲಿ ತಟಸ್ಥನಾಗಿರುತ್ತೇನೆ, ಎಂದು ವೀಣಾ ಕಾಶಪ್ಪನವರ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಅವರು ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಪಾಟೀಲ್ ಅವರಿಗೆ ಪಕ್ಷವು ಟಿಕೆಟ್ ನೀಡಿದ ನಂತರ ತೀವ್ರ ಅಸಮಾಧಾನಗೊಂಡಿದ್ದಾರೆ. ಶಿವಾನಂದ ಪಾಟೀಲ ವಿಜಯಪುರ ಮೂಲದವರು. ವೀಣಾ ಅವರು ಬಾಗಲಕೋಟೆಯ ನಿವಾಸಿ ಮಾತ್ರವಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ ವಿರುದ್ಧ ಸೋತ ನಂತರವೂ ಕಳೆದ ಐದು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರಣ ಪಕ್ಷದಿಂದ ಟಿಕೆಟ್ ಸಿಗಬೇಕೆಂದು ಬಯಸಿದ್ದರು.

ಕೆಲವು ಮಾಧ್ಯಮಗಳಲ್ಲಿ ಉಲ್ಲೇಖಿಸಿರುವಂತೆ ಯಾರೂ ನನಗೆ ಯಾವುದೇ ಆಫರ್ ನೀಡಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂಬ ನನ್ನ ಬೇಡಿಕೆಯಲ್ಲಿ ನಾನು ಇನ್ನೂ ದೃಢವಾಗಿದ್ದೇನೆ. ನನ್ನ ಬೇಡಿಕೆ ಈಡೇರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು ಎನ್ನುತ್ತಾರೆ ವೀಣಾ ಕಾಶಪ್ಪನವರ್.

SCROLL FOR NEXT