ಕುಮಾರಸ್ವಾಮಿ- ಸುಮಲತಾ, ಅಭಿಷೇಕ್ 
ರಾಜಕೀಯ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್- ಕುಮಾರಸ್ವಾಮಿ ಭೇಟಿ, ಮಹತ್ವದ ಮಾತುಕತೆ!

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಂಬರೀಶ್ ಅಣ್ಣನ ಮನೆ ನನಗೆ ಹೊಸದೇನೂ ಅಲ್ಲ. ನಾನು ಅಂಬರೀಶ್ ಒಟ್ಟಿಗೆ ಉಂಡು, ಬೆಳೆದವರು. ಸುಮಲತಾ ಅವರೊಂದಿಗೆ ಭೇಟಿ ಅತ್ಯಂತ ಸೌಹಾರ್ದಯುತವಾಗಿತ್ತು. ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಬೆಂಬಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಕುಮಾರಸ್ವಾಮಿ ಅವರೊಂದಿಗೆ ಆರೋಗ್ಯಕರ ಚರ್ಚೆಯಾಗಿದೆ. ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಕೋರಿದ್ದಾರೆ. ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ಕರೆದಿರುವ ಬಗ್ಗೆ ಅವರಿಗೆ ಹೇಳಿದ್ದೇನೆ. ಅಂದಿನ ಸಭೆಯಲ್ಲಿ ದರ್ಶನ್, ಅಭಿಷೇಕ್ ಇರಲಿದ್ದು, ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿರುವುದಾಗಿ ಸುಮಲತಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel