ವೀರಪ್ಪ ಮೊಯ್ಲಿ 
ರಾಜಕೀಯ

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಬಿಜೆಪಿ ಪಿತೂರಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ತರುವ ಬಿಜೆಪಿಯ ಯೋಜನೆಗಳನ್ನು ಪಿತೂರಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬೆಳಗಾವಿ: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ತರುವ ಬಿಜೆಪಿಯ ಯೋಜನೆಗಳನ್ನು ಪಿತೂರಿ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ನಿಯಮ ಜಾರಿಗೆ ತಂದರೆ ತಮ್ಮ ಪಕ್ಷವು ಗರಿಷ್ಠ ಮತಗಳನ್ನು ಪಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ನಂಬಿದ್ದಾರೆ. ಹೀಗಾಗಿ ನಿಯಮ ಜಾರಿಗೆ ತರಲು ಯತ್ನಿಸುತ್ತಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣಾ ಸಿದ್ಧಾಂತದ ಪ್ರಕಾರ, ಲೋಕಸಭೆ, ರಾಜ್ಯ ವಿಧಾನಸಭೆಗಳು, ಪಂಚಾಯತ್‌ಗಳು, ಸ್ಥಳೀಯ ಸಂಸ್ಥೆಗಳು ಇತ್ಯಾದಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಯೋಜನೆ ಇದೆ ಎಂದು ಮೊಯ್ಲಿ ಹೇಳಿದರು.

ಲೋಕಸಭೆಗೆ ನಡೆಯುತ್ತಿರುವ ಚುನಾವಣೆಯನ್ನು ಪೂರ್ಣಗೊಳಿಸಲು ಕನಿಷ್ಠ 60 ದಿನಗಳು ಬೇಕಾಗುತ್ತವೆ, ಇನ್ನೂ ಬಿಜೆಪಿಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯಂತೆ ಚುನಾವಣೆ ನಡೆದರೆ ಅದು ಪೂರ್ಣಗೊಳ್ಳಲು ಹಲವಾರು ವರ್ಷಗಳು ಬೇಕಾಗಬಹುದು ಎಂದು ಮೊಯ್ಲಿ ಲೇವಡಿ ಮಾಡಿದ್ದಾರೆ.

ಬಿಜೆಪಿಯು ದೇಶದ ಮೇಲೆ ತನ್ನ ಹಿಡಿತವನ್ನು ಸ್ಥಾಪಿಸಲು ಈ ಪರಿಕಲ್ಪನೆಯನ್ನು ಯೋಜಿಸುತ್ತಿದೆ ಎಂದು ಅವರು ಆರೋಪಿಸಿದರು. ಲೋಕಸಭಾ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳುತ್ತಿದೆ ಆದರೆ ವಾಸ್ತವದಲ್ಲಿ 150 ರಿಂದ 200 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ. ಮೋದಿಯವರ 10 ವರ್ಷಗಳ ಆಡಳಿತ ಕೊನೆಗೊಳ್ಳಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT