ಹೆಚ್ ಡಿ ಕುಮಾರಸ್ವಾಮಿ, ಬಿಎಸ್ ವೈ ಮತ್ತಿತರರ ಚಿತ್ರ 
ರಾಜಕೀಯ

ಪ್ರಜ್ವಲ್ ರೇವಣ್ಣ ವಿವಾದದ ನಡುವೆ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆ

ಕರ್ನಾಟಕದಲ್ಲಿ ನಡೆಯಲಿರುವ ದ್ವೈವಾರ್ಷಿಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಜೂನ್ 3 ರಂದು ಆರು ಸ್ಥಾನಗಳಿಗೆ ವಿಧಾನ ಪರಿಷತ್ತು ಚುನಾವಣೆ ನಡೆಯಲಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಕೇಸರಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ ಎಂದು ಬಿಜೆಪಿ ನಾಯಕರ ಅಭಿಪ್ರಾಯವಿದ್ದರೂ, ಕರ್ನಾಟಕದಲ್ಲಿ ನಡೆಯಲಿರುವ ದ್ವೈವಾರ್ಷಿಕ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಜೂನ್ 3 ರಂದು ಆರು ಸ್ಥಾನಗಳಿಗೆ ವಿಧಾನ ಪರಿಷತ್ತು ಚುನಾವಣೆ ನಡೆಯಲಿದೆ.

ರಾಜ್ಯ ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮೇ 7 ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿರುವ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದು, ಕೇಸರಿ ಪಕ್ಷದೊಂದಿಗೆ ತಮ್ಮ ಪಕ್ಷದ ಮೈತ್ರಿ ಮುಂದುವರಿಯುತ್ತದೆ ಎಂದು ಸೂಚಿಸಿದ್ದಾರೆ. ಎಸ್.ಎಲ್.ಭೋಜೇಗೌಡ ಪ್ರತಿನಿಧಿಸುತ್ತಿದ್ದ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಹಿಡಿದಿದ್ದು, ದಕ್ಷಿಣ ಶಿಕ್ಷಕರ ಸ್ಥಾನವನ್ನು ಮರಿತಿಬ್ಬೇಗೌಡ ಗೆದ್ದುಕೊಂಡಿದ್ದರು. ಆದರೆ ಮರಿತಿಬ್ಬೇಗೌಡ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ.

ಆಯನೂರು ಮಂಜುನಾಥ್ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿರುವ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಸ್ಥಾನಕ್ಕೆ ಬಿಜೆಪಿ ಹೊಸಬರ ಆಯ್ಕೆಗೆ ಮುಂದಾಗಿದೆ. ಬಿಜೆಪಿ ಎ ದೇವೇಗೌಡ ಪ್ರತಿನಿಧಿಸುವ ಬೆಂಗಳೂರು ಪದವೀಧರರ ಸ್ಥಾನ ಮತ್ತು

ವೈಎ ನಾರಾಯಣಸ್ವಾಮಿ ಪ್ರತಿನಿಧಿಸುವ ಆಗ್ನೇಯ ಶಿಕ್ಷಕರ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಡಾ ಚಂದ್ರಶೇಖರ ಬಿ ಪಾಟೀಲ್ ಗೆದ್ದಿರುವ ಈಶಾನ್ಯ ಪದವೀಧರರ ಸ್ಥಾನದಿಂದ ಸ್ಪರ್ಧಿಸಲಿದೆ.

ಚುನಾವಣೆ ನಡೆಯಲಿರುವ ಆರು ಸ್ಥಾನಗಳಲ್ಲಿ ಜೆಡಿಎಸ್ ಎರಡು ಸ್ಥಾನಗಳನ್ನು ಬಯಸಬಹುದು ಮತ್ತು ಉಳಿದ ನಾಲ್ಕರಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಆದರೆ 2024 ರ ಫೆಬ್ರವರಿಯಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯು ತಾನು ಹೊಂದಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ತ್ಯಾಗ ಮಾಡಿದ್ದರಿಂದ ಹೆಚ್ಚುವರಿಯಾಗಿ ಮತ್ತೊಂದು ಸ್ಥಾನವನ್ನು ಪಡೆಯಲು ಪ್ರಯತ್ನಿಸಬಹುದು. ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ವಕ್ತಾರ ಅಶ್ವತ್ಥನಾರಾಯಣ ಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಖಚಿತಪಡಿಸಿದ್ದಾರೆ. "ಆದರೆ ಸೀಟು ಹಂಚಿಕೆಯಲ್ಲಿ, ಎರಡೂ ಪಕ್ಷಗಳ ನಾಯಕರು ಒಟ್ಟಿಗೆ ಕುಳಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮತ್ತೊಬ್ಬ ವಕ್ತಾರ ಎಂಜಿ ಮಹೇಶ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಎರಡು ಪಕ್ಷಗಳ ಮೈತ್ರಿ ಲೋಕಸಭೆ ಚುನಾವಣೆಯ ಫಲಿತಾಂಶದ ಮೇಲೆ ಅವಲಂಬಿತವಾಗಿದೆ. ಹಾಸನ ಸೇರಿದಂತೆ ಜೆಡಿಎಸ್ ತನ್ನ ಮೂರು ಸ್ಥಾನಗಳನ್ನು ಗೆದ್ದರೆ, ಸನ್ನಿವೇಶ ವಿಭಿನ್ನವಾಗಿರುತ್ತದೆ ಮತ್ತು ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದರು.

ಬೆಂಗಳೂರು ಶಿಕ್ಷಕರ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಫಲವಾಗಿದೆ. ಅವರು (ಬಿಜೆಪಿ-ಜೆಡಿಎಸ್) ಪ್ರಜ್ವಲ್ ಅವರ ಮುಖದೊಂದಿಗೆ ಹೋಗಲಿ. ಜೂನ್ 3 ರ ಚುನಾವಣೆಗೆ ಮೈತ್ರಿ ಮುಂದುವರಿಸಿದರೆ ನಾವು ಸ್ವಾಗತಿಸುತ್ತೇವೆ, ಅದು ಕಾಂಗ್ರೆಸ್‌ಗೆ ಸಹಾಯ ಮಾಡುತ್ತದೆ ಎಂದು ಮಾಜಿ ಎಂಎಲ್‌ಸಿ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT