ಪ್ರಿಯಾಂಕಾ ಗಾಂಧಿ 
ರಾಜಕೀಯ

ಮೋದಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುತ್ತಿಲ್ಲ?: ಪ್ರಿಯಾಂಕಾ ಗಾಂಧಿ

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ದಾವಣಗೆರೆ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ದೇಶದ ರಾಜಕೀಯವನ್ನು "ಸರಿಪಡಿಸಲು" ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಸಮಯ ಬಂದಿದೆ ಎಂದು ಶನಿವಾರ ಹೇಳಿದ್ದಾರೆ.

ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಸನ ಎನ್‌ಡಿಎ ಅಭ್ಯರ್ಥಿ, ಹಾಲಿ ಜೆಡಿಎಸ್ ಸಂಸದನ ಪರ ಪ್ರಧಾನಿ ಮೋದಿ ಪ್ರಚಾರ ಮಾಡುತ್ತಾರೆ. ಒಂದು ಕಡೆ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಬಗ್ಗೆ ಮಾತನಾಡುತ್ತಾರೆ. ಇನ್ನೊಂದು ಕಡೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಅಪರಾಧಿಗಳ ಪರ ನಿಲ್ಲುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಾರ್ವಜನಿಕ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ, ನೀವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

ಇಂದು, ನಮ್ಮ ಪ್ರಧಾನಿ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ನಾಯಕನೊಂದಿಗೆ ವೇದಿಕೆಯ ಮೇಲೆ ಬಂದು ಅವರ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅವರ ರಾಸಲೀಲೆ ವಿಡಿಯೋಗಳು ಹೊರಬಂದಾಗ, ಆ ವ್ಯಕ್ತಿ ದೇಶದಿಂದ ಪರಾರಿಯಾಗುತ್ತಾನೆ. ಪ್ರಧಾನಿ ಮತ್ತು ಗೃಹ ಸಚಿವರಿಗೂ ಈ ಬಗ್ಗೆ ತಮಗೆ ಏನೂ ತಿಳಿದಿಲ್ಲದವರಂತೆ ಜನರ ಮುಂದೆ ನಾಟಕವಾಡುತ್ತಿದ್ದಾರೆ ಎಂದರು.

ಚುನಾವಣಾ ಸಂದರ್ಭದಲ್ಲಿ ಪ್ರಧಾನಿಯವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕಾ ಗಾಂಧಿ, ಮಹಿಳೆಯರನ್ನು ರಕ್ಷಿಸುತ್ತೇವೆ ಎಂದು ಅವರು ಯಾವ ಬಾಯಿಂದ ಹೇಳುತ್ತಾರೆ? ... ಅವರು ಚುನಾವಣಾ ವೇದಿಕೆಯಲ್ಲಿ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ, ಭಾರತದಲ್ಲಿ ಚುನಾವಣೆ ನಡೆಯುತ್ತಿದೆ..... ಹತ್ತು ವರ್ಷಗಳ ಆಡಳಿತದ ನಂತರ ನಿಮ್ಮ ಪ್ರಧಾನಿಯಿಂದ ನೀವು ಇದನ್ನು ನಿರೀಕ್ಷಿಸಿದ್ದೀರಾ? ಎಂದು ಪ್ರಶ್ನಿಸಿದರು.

"ನೀವು ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಸಮಯ ಬಂದಿದೆ. ನೀವು ಕರ್ನಾಟಕದಲ್ಲಿ ಮಾಡಿದಂತೆ ದೇಶದ ರಾಜಕೀಯವನ್ನು ಸರಿಪಡಿಸುವ ಸಮಯ ಬಂದಿದೆ. ಇದು ನಿಮ್ಮ ದೇಶ. ಅದನ್ನು ರಕ್ಷಿಸುವ ಜವಾಬ್ದಾರಿ ನಿಮ್ಮದು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT