ಬಿಎಲ್ ಸಂತೋಷ್‌ 
ರಾಜಕೀಯ

ಬಿಎಲ್ ಸಂತೋಷ್‌ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಉತ್ತರ ಕರ್ನಾಟಕ; ಕಲಬುರಗಿ ಸೇರಿ ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳ ಮೇಲೆ ಕಣ್ಣು

ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಭರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಬೆಂಗಳೂರು: ಮಂಗಳವಾರ ಮತದಾನ ನಡೆಯಲಿರುವ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಗರಿಗೆದರಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ಭರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಮೂಲಗಳ ಪ್ರಕಾರ, ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಮೌನ ಬೆಂಬಲ ನೀಡುತ್ತಿದ್ದಾರೆ ಎಂದು ವರದಿಯಾದ ನಂತರ, ಪಕ್ಷದ ಎಲ್ಲ ನಾಯಕರನ್ನು ಒಟ್ಟಿಗೆ ಇರಿಸಲು ಸಂತೋಷ್ ಇಲ್ಲಿಗೆ ಧಾವಿಸಿದ್ದಾರೆ.

ಸಂತೋಷ್ ಅವರು ಕಲಬುರಗಿ, ಬೀದರ್ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಕಮಿಟಿ ಕಾರ್ಯಕರ್ತರ ಸಭೆ ನಡೆಸಿದ್ದು, ಪಕ್ಷದ ಅಭ್ಯರ್ಥಿಗಳಾದ ಡಾ. ಉಮೇಶ್ ಜಾಧವ್, ಭಗವಂತ ಖೂಬಾ ಮತ್ತು ಹೊಸಬರಾದ ಬಸವರಾಜ ಕ್ಯಾವಟೂರು ಅವರು ಕ್ರಮವಾಗಿ ಕಾಂಗ್ರೆಸ್ ಅಭ್ಯರ್ಥಿಗಳಾದ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಸಾಗರ ಖಂಡ್ರೆ ಮತ್ತು ರಾಜಶೇಖರ್ ಹಿಟ್ನಾಳ್ ಅವರಿಂದ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ.

ರಾಯಚೂರಿನಲ್ಲಿ ಬಿಜೆಪಿಯ ರಾಜಾ ಅಮರೇಶ್ವರ ನಾಯ್ಕ್ ಅವರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಮತ್ತು ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಸಂಡೂರು ಕಾಂಗ್ರೆಸ್ ಶಾಸಕ ಇ ತುಕಾರಾಂ ಅವರನ್ನು ಎದುರಿಸುತ್ತಿದ್ದು, ಇಲ್ಲೂ ಕೂಡ ಸಂತೋಷ್ ಅವರು ಇದೇ ರೀತಿಯ ಸಭೆಗಳನ್ನು ನಡೆಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮೋದಿ ಅಲೆಯನ್ನು ಮಾತ್ರ ನೆಚ್ಚಿಕೊಳ್ಳದ ಬಿಜೆಪಿ ಈ ಭಾಗದಲ್ಲಿ ಎಲ್ಲ ರೀತಿಯಿಂದಲೂ ಪ್ರಯತ್ನ ನಡೆಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯ ವೇಳೆ ಎಸ್‌ಸಿ ಕೋಟಾವನ್ನು ವರ್ಗ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರಿಂದ ಮಾದಿಗ (ಎಸ್‌ಸಿ ಎಡ) ಸಮುದಾಯದ ಮತಗಳನ್ನು ಸೆಳೆಯಲು ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡ ಮಂದಕೃಷ್ಣ ಮಾದಿಗ ಅವರನ್ನು ಬಳಸಿಕೊಂಡಿದೆ.

ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಕೂಡ ಇಲ್ಲಿನ ಪ್ರಚಾರಕ್ಕೆ ಧುಮುಕಿದ್ದಾರೆ.

ಕುತೂಹಲಕಾರಿಯಾಗಿ, ರಾಯಚೂರಿನಲ್ಲಿ ಮೋದಿಯವರ ರ್ಯಾಲಿ ಮತ್ತು ಸಭೆಯಲ್ಲಿ ಭಾಗವಹಿಸಿದ್ದನ್ನು ಹೊರತುಪಡಿಸಿದರೆ, ಯಡಿಯೂರಪ್ಪ ಅವರು ಹಳೇ ಮೈಸೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆಸಿದಂತೆ ಆಕ್ರಮಣಕಾರಿಯಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಚಾರ ಮಾಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT