ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ 
ರಾಜಕೀಯ

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ್ ವಿಡಿಯೋ ಹೊರಬರಬಹುದು; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ': ಜಾರಕಿಹೊಳಿ

ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದಾಗ ನನ್ನ ಮಾತು ನಂಬಿರಲಿಲ್ಲ. ಈಗ ಏನಾಗಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಪ್ರಶ್ನಿಸಿದರು.

ಗೋಕಾಕ್: ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದಾಗ ನನ್ನ ಮಾತು ನಂಬಿರಲಿಲ್ಲ. ಈಗ ಏನಾಗಿದೆ ಎಂದು ಪ್ರಶ್ನಿಸಿದರು.

ರಾಜಕಾರಣದಲ್ಲಿ ಈಗ ಸೈದ್ಧಾಂತಿಕ ಹೋರಾಟ ಮುಗಿದು ಹೋಗಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ತುಳಿಯುವವರೇ ಜಾಸ್ತಿಯಾಗಿದೆ. ಸಿ.ಡಿ, ಪೆನ್‌ಡ್ರೈವ್‌ ಪ್ರಕರಣಗಳು ಯಾವುದು ಒಳ್ಳೆಯದಲ್ಲ. ಇದನ್ನು ಪಕ್ಷಾತೀತವಾಗಿ ಇಲ್ಲಿಗೆ ಮುಗಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್‌ ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಆಚೆ ಬಂದಿದ್ದರ ಹಿಂದೆ ನಾನು ಮೊದಲ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂದು ಹೇಳಿದ್ದೆ. ನನ್ನ ಮಾತನ್ನು ಯಾರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿರುವ ಆಡಿಯೋ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು. ಸಿ.ಎಂ ಅವರಿಗೆ ಮುಂದೆ ಕೈ‌ ಮುಗಿದು ಕೇಳಿಕೊಳ್ಳುತ್ತೇನೆ. ಈ ವಿಡಿಯೊ ಪ್ರಕರಣಗಳಿಗೆ ಪಕ್ಷಾತೀತವಾಗಿ ಕೊನೆಹಾಡಿ ಎಂದರು.

'ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಪ್ರಕರಣದಲ್ಲಿ ನೇರ ಕೈವಾಡ ಇದೆ. ಎಲ್ಲ ಸಾಕ್ಷಿ, ದಾಖಲೆಗಳೂ ನನ್ನ ಬಳಿ ಇವೆ. ಪ್ರಜ್ವಲ್ ವಿಚಾರದಲ್ಲಿ ಪರೋಕ್ಷವಾಗಿ ಆರೋಪಿ ಎನ್ನುತ್ತಿದ್ದಾರೆ. ಆದರೆ, ನನ್ನ ವಿಚಾರದಲ್ಲಿ ನೇರ ಆರೋಪಿ' ಎಂದು ಪ್ರಶ್ನೆಯೊಂದಕ್ಕೆ‌ ಉತ್ತರಿಸಿದರು.

'ನನ್ನ ಪ್ರಕರಣ ಸಿಬಿಐಗೆ ಕೊಟ್ಟರೆ ಎಲ್ಲ ಸಾಕ್ಷಿ ಒದಗಿಸುತ್ತೇನೆ. ನನ್ನ ಕೇಸಿನಲ್ಲಿ ಶಿವಕುಮಾರ್ ಮಾತ್ರವಲ್ಲ; ನಮ್ಮವರೂ ಕೆಲವರು ಭಾಗಿಯಾಗಿದ್ದಾರೆ. ಹೀಗಾಗಿ ನನಗೆ ಎಸ್.ಐ.ಟಿ ಮೇಲೆ ಆಗಲೂ ವಿಶ್ವಾಸ ಇರಲಿಲ್ಲ, ಈಗಲೂ ಇಲ್ಲ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT