ಬಿಜೆಪಿ, ಕಾಂಗ್ರೆಸ್  
ರಾಜಕೀಯ

ಹೊಸಕೋಟೆ ದೇವಾಲಯ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ಬೆಂಗಳೂರು: ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುಲವ ವಿಚಾರ ಸಂಬಂಧ ವಾಗ್ದಾಳಿ ನಡೆಸಿದ್ದ ಬಿಜೆಪಿ, ಹೊಸಕೋಟೆಯ ಅವಿಮುಕ್ತೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಯ ಸದಸ್ಯರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸೇರ್ಪಡೆ ಮಾಡಲಾಗಿದೆ. ಇದು ಮುಸ್ಲಿಮರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿತ್ತು. ಆದರೆ, ಇದು ತಮ್ಮದೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಾಡಲಾಗಿರುವ ಆದೇಶ ಎಂದು ತಿಳದ ಕೂಡಲೇ ಟ್ವೀಟ್ ಡಿಲೀಟ್ ಮಾಡಿತ್ತು.

ಈ ನಡವೆ ಟ್ವೀಟ್ ಸೇವ್ ಮಾಡಿಟ್ಟುಕೊಂಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದಿಂದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಪ್ರಶ್ನಿಸಿದ್ದಾರೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂದು ತಿಳಿಸಿದ್ದಾರೆ.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ, ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ರಾಮಲಿಂಗಾರೆಡ್ಡಿಯವರು ಮಾತನಾಡಿ, ಬಿಜೆಪಿಯವರು ರಣಹದ್ದುಗಳಿದ್ದಂತೆ ಯಾವಾಗಲೂ ಏನಾದರೂ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್