ಕೆಎಸ್ ಈಶ್ವರಪ್ಪ 
ರಾಜಕೀಯ

ಚುನಾವಣೆ ನಂತರ ಹೊಸ ಪಕ್ಷ ಕಟ್ಟಲು ನಾನು BSY ಅಲ್ಲ; ಯಡಿಯೂರಪ್ಪ ಪುತ್ರನನ್ನು ಬಂಧಿಸಿ: ಕೆಎಸ್ ಈಶ್ವರಪ್ಪ

ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಗುರುವಾರ ಒತ್ತಾಯಿಸಿದ್ದಾರೆ.

ಶಿವಮೊಗ್ಗ: ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಗುರುವಾರ ಒತ್ತಾಯಿಸಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪತ್ರಿಕೆಯ ಹೆಸರಿಲ್ಲದೆ, ಸುದ್ದಿ ರೂಪದಲ್ಲಿ ಪ್ರಕಟವಾಗಿರುವ ನಕಲಿ ಸುದ್ದಿಗಳನ್ನು ಒಳಗೊಂಡ ಪೆನ್ ಡ್ರೈವ್ ಅನ್ನು ಬಿಡುಗಡೆ ಮಾಡಿದರು. ಇದರಲ್ಲಿ ಈಶ್ವರಪ್ಪ ಅವರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ ಎಂಬ ರೀತಿ ಬಿಂಬಿಸಲಾಗಿದೆ. ರಾಘವೇಂದ್ರ ಅವರು ಶಿಕಾರಿಪುರದಲ್ಲಿ ಸಾರ್ವಜನಿಕ ಸಭೆ ಆಯೋಜಿಸದಂತೆ ತಡೆದಿದ್ದು, ಶಿರಾಳಕೊಪ್ಪದ ರಾಷ್ಟ್ರಭಕ್ತರ ಬಳಗದ ಕಚೇರಿಯಲ್ಲಿ ಮಾಂತ್ರಿಕ ಕೃತ್ಯವೆಸಗಿದ್ದಾರೆ ಎಂದು ಮಾಜಿ ಡಿಸಿಎಂ ಆರೋಪಿಸಿದ್ದಾರೆ.

ನನ್ನ ಪರವಾಗಿ ಬಿಜೆಪಿಗೆ ವೋಟ್ ಕೊಡಿ, ಈಶ್ವರಪ್ಪ', 'ನನಗೆ ನನ್ನ ತಪ್ಪಿನ ಅರಿವಾಗಿದೆ, ಕಾಂಗ್ರೆಸ್ಸಿಗೆ ಲಾಭವಾಗುವುದು ಬೇಡ ಈ ರೀತಿಯ ಶೀರ್ಷಿಕೆಯಲ್ಲಿ ಹಳೆಯ ಫೋಟೋಗಳನ್ನು ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿರುವಂತೆ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿವೈ ರಾಘವೇಂದ್ರ ಅವರ ಪರ ಪ್ರಚಾರ ಮಾಡಿದ್ದ ವಿಡಿಯೋವೊಂದು ಇದೀಗ ವೈರಲ್‌ ಆಗುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮತದಾನದ ದಿನದಂದು ವೈರಲ್ ಆಗಿರುವ ಸುಳ್ಳು ಸುದ್ದಿ ಮತ್ತು ವಿಡಿಯೋಗಳನ್ನು ತಯಾರಿಸಿ ಹರಿಬಿಟ್ಟಿರುವ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ. ಈ ಸಮಸ್ಯೆಯು ಕೆಲವು ಮತದಾರರನ್ನು ಗೊಂದಲಕ್ಕೀಡುಮಾಡಿದೆ ಮತ್ತು ಅನೇಕರು ನನ್ನ ಪರವಾಗಿ ತಮ್ಮ ಮತಗಳನ್ನು ಚಲಾಯಿಸುವುದನ್ನು ತಡೆದಿದೆ ಎಂದು ಈಶ್ವರಪ್ಪ ಹೇಳಿದರು.

ಈ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮೇ 15ರವರೆಗೆ ಕಾಲಾವಕಾಶ ನೀಡುವುದಾಗಿ ತಿಳಿಸಿದ ಈಶ್ವರಪ್ಪ, ತಪ್ಪಿದ್ದಲ್ಲಿ ಮುಂದಿನ ಹಾದಿಯ ಬಗ್ಗೆ ತೀರ್ಮಾನಿಸಬೇಕಾಗುತ್ತದೆ ಎಂದರು.

'ಬಿಜೆಪಿ ನನ್ನ ತಾಯಿ ಇದ್ದಂತೆ, ನಾನು ಪಕ್ಷದ ಜೊತೆ ಇರುತ್ತೇನೆ. ಚುನಾವಣಾ ಫಲಿತಾಂಶದ ನಂತರ ಹೊಸ ಪಕ್ಷ ಕಟ್ಟಲು ನಾನು ಬಿಎಸ್ ಯಡಿಯೂರಪ್ಪ ಅಲ್ಲ. ಬಿಜೆಪಿಯ ಹಿಂದುತ್ವ ಸಿದ್ಧಾಂತವನ್ನು ರಕ್ಷಿಸುವುದು ನನ್ನ ಏಕೈಕ ಗುರಿಯಾಗಿದೆ' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT