ಸಂಗ್ರಹ ಚಿತ್ರ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಮೈತ್ರಿ ಮುಂದುವರೆಸಲು BJP-JDS ನಿರ್ಧಾರ; ಪ್ರಜ್ವಲ್ ಪ್ರಕರಣ ಅಸ್ತ್ರವಾಗಿಸಿಕೊಳ್ಳಲು ಕಾಂಗ್ರೆಸ್ ಮುಂದು!

ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸಲು ನಿರ್ಧರಿಸಿದ್ದು, ಈ ನಡುವಲ್ಲೇ ಆಡಳಿತಾರೂಢ ಕಾಂಗ್ರೆಸ್ ದೋಸ್ತಿಗಳ ವಿರುದ್ಧ ಪ್ರಜ್ವಲ್ ಪ್ರಕರಣವನ್ನೇ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ತುಮಕೂರು: ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸಲು ನಿರ್ಧರಿಸಿದ್ದು, ಈ ನಡುವಲ್ಲೇ ಆಡಳಿತಾರೂಢ ಕಾಂಗ್ರೆಸ್ ದೋಸ್ತಿಗಳ ವಿರುದ್ಧ ಪ್ರಜ್ವಲ್ ಪ್ರಕರಣವನ್ನೇ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಅದರ ಸುಳಿವವನ್ನು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ನೀಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪೆನ್ ಡ್ರೈವ್ ಕೇಸ್ ಹಿಡಿದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಲೇವಡಿ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಈಗಾಗಲೇ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪ್ರಬುದ್ಧ ಶಿಕ್ಷಕ ಮತದಾರರು ಉತ್ತರ ಕೊಟ್ಟಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಪ್ರಜ್ವಲ್ ಪೋಟೋ ಹಾಕಿಕೊಂಡು ಕ್ಯಾಂಪೇನ್ ಮಾಡಲಿ, ನಮಗೇನು ಅಭ್ಯಂತರ ಇಲ್ಲ. ನಾವು ಚುನಾವಣೆಯನ್ನ ಫೇಸ್ ಮಾಡುತ್ತೇವೆ ಎಂದು ಹೇಳಿದರು.

ರಮೇಶ್ ಬಾಬು ಜೆಡಿಎಸ್‌ನಿಂದ ಬಂದವರು ಎಂಬ ಆರೋಪ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಮಾಹಿತಿ ತಪ್ಪು. ಹಾಗೆ ನೋಡಿದರೆ ದೇವೇಗೌಡರು ಸಹ ಕಾಂಗ್ರೆಸ್‌ ಪಾರ್ಟಿಯಿಂದ ಬಂದವರು. ಈ ದೇಶದಲ್ಲಿ ಎಲ್ಲ ಪಾರ್ಟಿಗಳಿಗೆ ಮೂಲ, ಮಾತೃ ಪಾರ್ಟಿ ಕಾಂಗ್ರೆಸ್ ಪಕ್ಷವೇ ಆಗಿದೆ. ಹಾಗಾಗಿ ದೇವೇಗೌಡರು ಸಹ ಕಾಂಗ್ರೆಸ್ ಪಾರ್ಟಿಯಿಂದ ಬಂದವರಾಗಿದ್ದಾರೆ ಎಂದರು.

ನಾನು ಕಾಂಗ್ರೆಸ್‌ಗೆ ಬಂದು ಐದು ವರ್ಷ ಆಯ್ತು. ನಾನಾಗಿಯೇ ಜೆಡಿಎಸ್‌ನಿಂದ ಆಚೆ ಬಂದಿಲ್ಲ. ನನ್ನಂತಹವರನ್ನು, ಡಿಟಿ ಶ್ರೀನಿವಾಸ, ಮಧು ಬಂಗಾರಪ್ಪರಂತಹವರನ್ನು, ಪಿ.ಜಿ.ಆರ್.ಸಿಂಧ್ಯಾ, ಎಂಸಿ ನಾಣಯ್ಯ.. ಅಂತಹವರನ್ನೆಲ್ಲ ‘ಅವರೇ’ ಆಚೆ ಕಳಿಸಿದ್ದಾರೆ. ಜೆಡಿಎಸ್‌ನಲ್ಲಿ ಅಲ್ಲ, ಜನತಾದಳದಲ್ಲಿ ನಾನು ಕುಮಾರಸ್ವಾಮಿಗಿಂತ ಸೀನಿಯರ್. ಅವರು ನನ್ನನ್ನು ನಡೆಸಿಕೊಂಡ ರೀತಿ ನಮ್ಮಂತಹವರೇ ಬಿಟ್ಟುಹೋಗುವಂತಹ ವಾತಾವರಣ ನಿರ್ಮಾಣದ್ದಾಗಿತ್ತು ಎಂದು ತಿರುಗೇಟು ನೀಡಿದರು.

ಇದೇ ವೇಳೆ ತುಮಕೂರಿನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿಟಿ ಶ್ರೀನಿವಾಸ್ ಪರ ಕಾಂಗ್ರೆಸ್ ಪ್ರಚಾರಕ್ಕೆ ಬಾಬು ಚಾಲನೆ ನೀಡಿದರು.

ಮೇ 13 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶ್ರೀನಿವಾಸ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 44,422 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಇದೆಲ್ಲವೂ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ತುರ್ತು ಆಂಬ್ಯುಲೆನ್ಸ್ ಸೇವೆಗಳಿಗಾಗಿ ಕೇಂದ್ರೀಕೃತ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಪ್ರಾರಂಭ

ತಮಿಳುನಾಡು: AIADMK ಮೂವರು ಶಾಸಕರು ರಾಜೀನಾಮೆ, ಟಿವಿಕೆಗೆ ಸೇರ್ಪೆಡೆ, ಪಳನಿಸ್ವಾಮಿಗೆ ಮತ್ತೊಂದು ಹೊಡೆತ!

ಅಂಬೇನಾಲಿ ಘಾಟ್​ನಲ್ಲಿ ಭಯಾನಕ ಅಪಘಾತ: ಸಾವಿರ ಅಡಿ ಆಳದ ಪ್ರಪಾತಕ್ಕೆ ಬಿದ್ದ SUV ಕಾರು; 8 ಯುವಕರು ಸಾವು!

ಯುದ್ಧ 3ನೇ ತಿಂಗಳಿಗೆ ಕಾಲಿಡುತ್ತಿರುವುದರಿಂದ '3F' ಮೇಲೆ ನಿಗಾ ವಹಿಸುವಂತೆ ಕೇಂದ್ರ ಸಚಿವೆ ಸೀತಾರಾಮನ್ ಕರೆ; Video

SCROLL FOR NEXT