ಸಿದ್ದರಾಮಯ್ಯ 
ರಾಜಕೀಯ

ಮಹಾ ಸಿಎಂ ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ, ಸರ್ಕಾರ ಬೀಳಿಸುವ ಬಿಜೆಪಿ ಯತ್ನ ಯಶಸ್ವಿ ಆಗಲ್ಲ: ಸಿದ್ದರಾಮಯ್ಯ

ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಯಶಸ್ವಿ ಆಗುವುದಿಲ್ಲ. ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿ ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಯಶಸ್ವಿ ಆಗುವುದಿಲ್ಲ. ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಿರುಗೇಟು ನೀಡಿದ್ದಾರೆ.

ಲೋಕಸಭೆ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉರುಳಿಸಲು Operation Nath ಯೋಜನೆ ಸಿದ್ದವಾಗುತ್ತಿದೆ ಎಂಬ ಏಕನಾಥ್​ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಏಕನಾಥ್​ ಶಿಂಧೆ ಭ್ರಮೆಯಲ್ಲಿದ್ದಾರೆ. ಯಾವ ಕಾರಣಕ್ಕೂ ಅಪರೇಷನ್ ಕಮಲ ಮಾಡಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ‘ಇಂಡಿಯಾ’ ಮೈತ್ರಿಕೂಟ ಗೆಲ್ಲುತ್ತದೆ ಎಂದು ಹೇಳಿದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶತಾಗಿ ಸರ್ಕಾರ ಬೀಳಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎಂ ಹೇಳಿದರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು, ಮಹಾರಾಷ್ಟ್ರ ಸರ್ಕಾರ ಉಳಿಯೋದೆ ಡೌಟು ಇದೆ. ಅಲ್ಲಿ ಶಾಸಕರು ಯುಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ ಎಂದು ಭವಿಷ್ಯ ನುಡಿದರು.

ಎನ್ ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗ್ತಾ ಇದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ. ನಮ್ಮ ಸರ್ಕಾರದಲ್ಲಿ ಯಾವುದೇ ಸಿಂಧೆ ಇಲ್ಲ. ಅವರಲ್ಲೇ ಸಿಂಧೆ ಇದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT