ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರಾ? ಡಿಕೆ ಶಿವಕುಮಾರ್

ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಪ್ರಧಾನಿ ನರೇಂದ್ರ ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರೆಯೇ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಲಖನೌ: ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಪ್ರಧಾನಿ ನರೇಂದ್ರ ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರೆಯೇ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಲಕ್ನೋದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ದೇಶದ 'ಹಣದುಬ್ಬರ ಮತ್ತು ನಿರುದ್ಯೋಗ'ದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ್ದ ಭರವಸೆಯಂತೆ ವಾಪಾಸ್ ತರಬೇಕಾಗಿದ್ದ ಕಪ್ಪು ಹಣ್ಣ ಎಲ್ಲಿದೆ? ರೈತರ ಆದಾಯವನ್ನು ಏಕೆ ದ್ವಿಗುಣಗೊಳಿಸಲಿಲ್ಲ. ಯುವ ಜನತೆಗೆ ವರ್ಷಕ್ಕೆ 2 ಕೋಟಿ ಉದ್ಯೋಗಗಳು ಎಲ್ಲಿವೆ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಬಿಜೆಪಿ ಈ ಬಗ್ಗೆ ಮೊದಲು ಭಾರತದ ಜನತೆಗೆ ಉತ್ತರಿಸಬೇಕಾಗಿದೆ ಎಂದರು.

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮೊದಲ ದಿನವೇ 5 ಗ್ಯಾರಂಟಿಗಳನ್ನು ಪರಿಚಯಿಸಿದೆ. 5 ಗ್ಯಾರಂಟಿಗಳನ್ನು ಮೊದಲ ತಿಂಗಳಲ್ಲಿಯೇ ಕಾರ್ಯಗತಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವ್ಯತ್ಯಾಸ ಸ್ಪಷ್ಟವಾಗಿದೆ. ಭರವಸೆಗಳನ್ನು ಈಡೇರಿಸುವವರನ್ನು ಜನರು ನೋಡುತ್ತಾರೆ ಮತ್ತು ಮತ ಚಲಾಯಿಸುತ್ತಾರೆ. ಅದಕ್ಕಾಗಿಯೇ ಭಾರತದಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ಉಜ್ವಲ ಭವಿಷ್ಯದತ್ತ ಮುನ್ನಡೆಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್