ಸಲೀಂ ಅಹ್ಮದ್ 
ರಾಜಕೀಯ

ಲೋಕಸಭೆ ಚುನಾವಣೆ ಫಲಿತಾಂಶ: ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಒಲವು; 13-14 ರಲ್ಲಿ ಗೆಲುವು?

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹುತೇಕ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿರುವುದರಿಂದ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ.

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹುತೇಕ ಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿ ಬಂದಿರುವುದರಿಂದ ಕಾಂಗ್ರೆಸ್ ಹುಮ್ಮಸ್ಸಿನಲ್ಲಿದೆ.

ಪಕ್ಷವು ಸುಮಾರು 18-20 ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ. ಆದರೆ ಕೆಲವು ಪ್ರಜ್ಞಾವಂತ ನಾಯಕರು ಸುಮಾರು 13-14 ಕ್ಷೇತ್ರಗಳಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ಬರಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕ್ಷೇತ್ರದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಸ್ಥಳೀಯ ಮುಖಂಡರು ಹೇಳಿದ್ದಾರೆ. ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ವಿರುದ್ಧ ಕಣಕ್ಕಿಳಿದಿರುವ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ದಾವಣಗೆರೆಯ ಕಾಂಗ್ರೆಸ್ ಘಟಕ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದೆ. ಬಿಜೆಪಿಯ ಬಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿ ಇ ತುಕಾರಾಂ ಅವರಿಗೆ ಎಲ್ಲಾ ಬೂತ್‌ಗಳಿಂದ ಪ್ರತಿಕ್ರಿಯೆ ಉತ್ತಮವಾಗಿದೆ ಎಂದು ಬಳ್ಳಾರಿ ಕಾರ್ಯಕರ್ತರು ಮತ್ತು ಮುಖಂಡರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಮೃಣಾಲ್ ಹೆಬ್ಬಾಳ್ಕರ್ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರತ್ತ ಜನರ ಚಿತ್ತ ಹರಿದಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ಹಿಂದಿನ ಮೂರು ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋತಿದ್ದರೂ ಸಹ, ಬಿಜೆಪಿಯ ಮಾಜಿ ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ವಿರುದ್ಧ ಪ್ರಿಯಾಂಕಾ, ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಮೃಣಾಲ್ ಸ್ಪರ್ಧಿಸಿದ್ದಾರೆ.

ಜೆಡಿಎಸ್‌ನ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌, ಮಂಡ್ಯದಲ್ಲಿ ಸ್ಟಾರ್‌ ಚಂದ್ರು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದು ಉತ್ತಮ ಫೈಟ್ ಕೊಡಬಹುದು ಎಂದು ಪಕ್ಷದ ಮುಖಂಡರು ಹೇಳುತ್ತಿದ್ದರೂ ಫಲಿತಾಂಶದ ಮುನ್ಸೂಚನೆ ನೀಡುವಲ್ಲಿ ಜಾಗರೂಕರಾಗಿದ್ದಾರೆ.

ಗುಲ್ಬರ್ಗದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸ್ಪರ್ಧಿಸಿದ್ದು ಪ್ರತಿಕ್ರಿಯೆ ಮಿಶ್ರವಾಗಿದೆ. ಇದು ಇತ್ತೀಚಿನ ಘರ್ಷಣೆಯಿಂದಾಗಿ, ಒಂದು ಸಮುದಾಯದ 50,000-60,000 ಸದಸ್ಯರು ಮತ್ತೊಂದು ಸಮುದಾಯದ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಆದರೆ ಇಲ್ಲಿ ದಲಿತ ಮತ್ತು ಅಲ್ಪಸಂಖ್ಯಾತರ ಮತಗಳ ಪ್ರಮಾಣ ಹೆಚ್ಚಾಗಿದ್ದು, ಇತರೆ ಸಮುದಾಯಗಳ ಸಂಖ್ಯೆ ಕಡಿಮೆಯಿದೆ ಎಂದು ವಿಶ್ಲೇಷಕ ಬಿ.ಎಸ್.ಮೂರ್ತಿ ತಿಳಿಸಿದ್ದಾರೆ. ರಾಯಚೂರಿನಲ್ಲಿ (ಎಸ್‌ಟಿ ಮೀಸಲು) ಕಾಂಗ್ರೆಸ್‌ಗೆ ಶುಭ ಸುದ್ದಿ ಖಚಿತವಾಗಿದೆ, ಅಲ್ಲಿ ಮಾಜಿ ಐಎಎಸ್ ಅಧಿಕಾರಿ ಕುಮಾರ್ ನಾಯಕ್ ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ರೈ ವಿರುದ್ಧ ಸ್ಪರ್ಧಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಬೆಂಗಳೂರು ಸೆಂಟ್ರಲ್ ಮತ್ತು ಗ್ರಾಮಾಂತರದಲ್ಲಿ ಕಾಂಗ್ರೆಸ್‌ಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬಿಜೆಪಿಯ ಪಿಸಿ ಮೋಹನ್ ಮತ್ತು ಡಾ ಸಿಎನ್ ಮಂಜುನಾಥ್ ವಿರುದ್ಧ ಕಾಂಗ್ರೆಸ್‌ನ ಮನ್ಸೂರ್ ಅಲಿಖಾನ್ ಮತ್ತು ಡಿಕೆ ಸುರೇಶ್ ಗೆಲುವು ಸಾಧಿಸಲಿದ್ದಾರೆ ಎಂದು ಮುಖಂಡರು ಹೇಳಿದ್ದಾರೆ.

ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ಹುರುಪು ಹೆಚ್ಚಾಗಿದ್ದು ಬಿಜೆಪಿ ಮುಖಂಡ ವಿ ಸೋಮಣ್ಣ ವಿರುದ್ಧ ಪಕ್ಷದ ಮುದ್ದ ಹನುಮೇಗೌಡ ಕಣಕ್ಕಿಳಿದಿದ್ದಾರೆ. ಲಿಂಗಾಯತರು ಸೋಮಣ್ಣರನ್ನು ಅಗಾಧವಾಗಿ ಬೆಂಬಲಿಸಿದರೆ, ಎಸ್‌ಸಿ/ಎಸ್‌ಟಿಗಳನ್ನು ಹೊರತುಪಡಿಸಿ, ಕುರುಬರು ಮತ್ತು ಅಲ್ಪಸಂಖ್ಯಾತರು ಒಕ್ಕಲಿಗರಾದ ಮುದ್ದಹನುಮೇಗೌಡರನ್ನು ಬೆಂಬಲಿಸಿದ್ದಾರೆ ಎಂದು ಅವರು ತೀರ್ಮಾನಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಮಾಜಿ ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಯುವ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಅವರ ಪುತ್ರ ರಕ್ಷಾ ರಾಮಯ್ಯ ಕಣಕ್ಕಿಳಿದಿದ್ದಾರೆ, ಅಲ್ಲಿಯೂ ಕೂಡ ಪಕ್ಷ ಉತ್ತಮ ಫಲಿತಾಂಶ ತೆಗೆಯಲಿದೆ ಎಂದು ಹೇಳಲಾಗುತ್ತಿದೆ. ಕೋಲಾರ ಕೂಡ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್ ಪರವಾಗಿರಬಹುದು, ಜೆಡಿಎಸ್‌ನ ಮಲ್ಲೇಶ್ ಬಾಬು ಕೋಲಾರ ಅಭ್ಯರ್ಥಿಯಾಗಿದ್ದಾರೆ.

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ವಿರುದ್ಧ ಕಾಂಗ್ರೆಸ್ ವಕ್ತಾರ ಹಾಗೂ ಒಕ್ಕಲಿಗ ಮುಖಂಡ ಎಂ.ಲಕ್ಷ್ಮಣ್ ಕಣಕ್ಕಿಳಿದಿರುವ ಮೈಸೂರಿನಲ್ಲಿ ಕಾಂಗ್ರೆಸ್ ಪರ ಒಲವಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್ ನ ಸುನಿಲ್ ಬೋಸ್‌ ವಿರುದ್ಧ, ಬಿಜೆಪಿಯ ಅಷ್ಟೇನೂ ಪರಿಚಿತವಲ್ಲದ ಎನ್ ಬಾಲರಾಜ್ ಕಣಕ್ಕಿಳಿದಿದ್ದು ಇದು ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಸ್ಥಳೀಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಬೆಂಗಳೂರು ದಕ್ಷಿಣದಲ್ಲಿ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸ್ಪರ್ಧಿಸಿದ್ದಾರೆ. ಆದರೆ 2019 ರಲ್ಲಿ ಕ್ಷೇತ್ರದಿಂದ ಕಾಂಗ್ರೆಸ್‌ಗೆ ನಿರೀಕ್ಷೆಗಳು ಕಳಪೆಯಾಗಿರುವುದರಿಂದ ಈ ಬಾರಿ ಉತ್ತಮವಾಗಿದೆ ಎಂದು ಅವರು ಹೇಳಿದರು. ಕರ್ನಾಟಕದಲ್ಲಿ 18-20 ಸ್ಥಾನ ಗೆಲ್ಲಲಿದ್ದೇವೆ ಮತ್ತು ಮೇ 7 ರಂದು ಚುನಾವಣೆ ನಡೆದ ಉತ್ತರ ಕರ್ನಾಟಕದಲ್ಲಿ 10 ಸ್ಥಾನ ಗೆಲ್ಲಬೇಕು ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT