ಸಾಂದರ್ಭಿಕ ಚಿತ್ರ  
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಹಣ, ಉಡುಗೊರೆ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳ ಆಮಿಷ!

ತಲಾ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಬೆಂಗಳೂರು: ಸಾರ್ವತ್ರಿಕ ಚುನಾವಣೆ 2024ರ ಫಲಿತಾಂಶಕ್ಕೆ ಒಂದು ದಿನ ಮೊದಲು ಜೂನ್ 3 ರಂದು ದ್ವೈವಾರ್ಷಿಕ ವಿಧಾನ ಪರಿಷತ್ ಚುನಾವಣೆ ಆರು ಸ್ಥಾನಗಳಿಗೆ ನಡೆಯಲಿದೆ. ತಲಾ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಇತ್ತೀಚೆಗಷ್ಟೇ ಮುಗಿದ ಲೋಕಸಭೆ ಚುನಾವಣೆ ವೇಳೆ ಮತದಾರರನ್ನು ಓಲೈಸಲು ಹಲವು ಕಡೆಗಳಲ್ಲಿ ಉಡುಗೊರೆ ಮತ್ತು ನಗದಿನ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕೆಲವು ಅಭ್ಯರ್ಥಿಗಳ ವಿರುದ್ಧ ಇದೇ ರೀತಿಯ ತಂತ್ರವನ್ನು ಅಳವಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.

ಕೌನ್ಸಿಲ್ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಕಡಿಮೆ ಸಂಖ್ಯೆಯಲ್ಲಿರುವ ಮತದಾರರನ್ನು ತಲುಪಲು ಉಡುಗೊರೆ, ನಗದು ಆಮಿಷಗಳು ಸುಲಭ ಮಾರ್ಗಗಳು ಎಂದು ಹೇಳಲಾಗುತ್ತಿದೆ. ಮತದಾರರನ್ನು ಪಟ್ಟಿಗೆ ಸೇರಿಸಲು ಉಪಕ್ರಮ ಕೈಗೊಂಡಿರುವ ಕೆಲವರು, ಗಾಲಾ ಪಾರ್ಟಿಗಳನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಮೊನ್ನೆ ಗುರುವಾರ ಬಿಜೆಪಿ ಕಾರ್ಯಕರ್ತರಿಗೆ ಆನೇಕಲ್‌ನಲ್ಲಿ ಗೋಡೌನ್ ನಲ್ಲಿ ಬೆಂಗಳೂರು ಪದವೀಧರರ ಪರಿಷತ್ತಿನ ಅಭ್ಯರ್ಥಿಗೆ ಸೇರಿದ ಉಡುಗೊರೆ ಬಾಕ್ಸ್‌ಗಳನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಗೋಡೌನ್ ಮೇಲೆ ದಾಳಿ ನಡೆಸಿದ್ದಾರೆ, ಅಭ್ಯರ್ಥಿಗಳು ಮತದಾರರಿಗೆ ನಗದು ಹಂಚಲು ನಡೆಸುತ್ತಿದ್ದಾರೆ ಎಂದು ನಾಯಕರೊಬ್ಬರು ಆರೋಪಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ಮುಖಂಡರೂ ಆಗಿರುವ ಶಿಕ್ಷಕರೊಬ್ಬರು, ಕಳೆದ ಬಾರಿ ಅಭ್ಯರ್ಥಿಯೊಬ್ಬರು ಪ್ರತಿ ಮತಕ್ಕೆ 5,000 ರೂಪಾಯಿಗಳನ್ನು ಹಂಚಿದ್ದರು. ಈ ಬಾರಿ 10 ಸಾವಿರ ರೂಪಾಯಿ ನೀಡುತ್ತಿದ್ದಾರೆ. ದಕ್ಷಿಣ ಶಿಕ್ಷಕರಂತಹ ಕೆಲವು ಕೌನ್ಸಿಲ್ ಸ್ಥಾನಗಳಲ್ಲಿ, ಪ್ರತಿ ಮತಕ್ಕೆ 25,000 ರೂಪಾಯಿ ನೀಡುತ್ತಿದ್ದಾರೆ. ಒಬ್ಬ ಅಭ್ಯರ್ಥಿಯು ಅರ್ಧದಷ್ಟು ಮತದಾರರನ್ನು ಅಕ್ರಮ ಮಾರ್ಗಗಳ ಮೂಲಕ ತಲುಪಿದರೆ ಮತ್ತು ಅವರ ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆಯುವುದು ಖಚಿತವಾಗಿದ್ದರೆ, ಅವರ ಗೆಲುವು ಬಹುತೇಕ ಖಚಿತವಾಗಿರುತ್ತದೆ. ಸುಮಾರು 20 ವರ್ಷಗಳ ಹಿಂದೆ ಅಭ್ಯರ್ಥಿಗಳು ಅಂಚೆ ಕಾರ್ಡ್‌ಗಳನ್ನು ಕಳುಹಿಸುವ ಮೂಲಕ ಮತ ಕೇಳುತ್ತಿದ್ದರು ಎಂದು ಹೇಳುತ್ತಾರೆ.

ಲೋಕಸಭೆ ಚುನಾವಣೆಗಿಂತ ಭಿನ್ನವಾಗಿ, ಕೌನ್ಸಿಲ್ ಚುನಾವಣೆಯಲ್ಲಿ ವೆಚ್ಚದ ಮೇಲೆ ಯಾವುದೇ ಮಿತಿಯಿಲ್ಲ ಮತ್ತು ಅಭ್ಯರ್ಥಿಗಳು ಭಾರತೀಯ ಚುನಾವಣಾ ಆಯೋಗದ ಮುಂದೆ ಅದನ್ನು ಸಲ್ಲಿಸುವ ಸಾಧ್ಯತೆಯಿಲ್ಲ. ಎಲ್ಲಾ ವೆಚ್ಚದಲ್ಲಿಯೂ ಗೆಲುವು ಸಾಧಿಸಲು ದೊಡ್ಡ ಮೊತ್ತವನ್ನು ಖರ್ಚು ಮಾಡುವ ಉದ್ದೇಶ ಹೊಂದಿರುವ ಕೆಲವು ಅಭ್ಯರ್ಥಿಗಳಿಗೆ ಇದು ವರದಾನವಾಗಿ ಬಂದಿರಬಹುದು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಉಚಿತವಾಗಿ ಹಣ ಹಂಚಿಕೆ ಮಾಡುವುದು ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ಭ್ರಷ್ಟ ಪದ್ಧತಿಗಳ ಅಡಿಯಲ್ಲಿ ಬರುತ್ತದೆ. ಗೋಡೌನ್ ಗಳಲ್ಲಿ ಉಚಿತ ಉಡುಗೊರೆಗಳನ್ನು ಹಂಚಲು ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದರೆ ದಾಳಿ ನಡೆಸುತ್ತೇವೆ. ಚುನಾವಣಾ ಪ್ರಚಾರಕ್ಕಾಗಿ ಕಾನೂನು ವೆಚ್ಚಕ್ಕೆ ಸಂಬಂಧಿಸಿದಂತೆ, ಅಭ್ಯರ್ಥಿಗಳಿಗೆ ಯಾವುದೇ ಮಿತಿಯಿಲ್ಲ ಎಂದು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (CEO) ಮನೋಜ್ ಕುಮಾರ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಅಭ್ಯರ್ಥಿ ಉಡುಗೊರೆ ಹಂಚಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು: ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಮತದಾರರಿಗೆ ಆಮಿಷವೊಡ್ಡಲು ಉಡುಗೊರೆ ಹಂಚಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ನಾಯಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ದಾಖಲೆಯ 10ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ನಾಳೆ ಪ್ರಮಾಣವಚನ: BJPಯ ಸಾಮ್ರಾಟ್ ಚೌಧರಿ, ವಿಜಯ್ ಸಿನ್ಹಾ DCM!

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ, VIKAS ಕುರಿತು ಉಪನ್ಯಾಸ; Video

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

SCROLL FOR NEXT