ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು: ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೇ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು‌. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದರು.

ಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆ ಉಳಿಸಬೇಕು” ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT