ರಘುಪತಿ ಭಟ್ 
ರಾಜಕೀಯ

Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಜೂ.03 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ನೈಋತ್ಯ ಪದವೀಧರರ ಕ್ಷೇತ್ರದಿಂದ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ಉಂಟುಮಾಡಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದು, 2 ದಿನಗಳಲ್ಲಿ ಪಕ್ಷಕ್ಕೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಬದಲಿಗೆ ಧನಂಜಯ ಸರ್ಜಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿದಾಗಿನಿಂದ ಮತ್ತು ಚುನಾವಣೆಯಲ್ಲಿ ಗೆದ್ದ ಯಶಪಾಲ್ ಸುವರ್ಣರನ್ನು ಕಣಕ್ಕಿಳಿಸಿದಾಗಿನಿಂದ ರಘುಪತಿ ಭಟ್ ಅಸಮಾಧಾನ ಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT