ರಘುಪತಿ ಭಟ್ 
ರಾಜಕೀಯ

Karnataka MLC Elections: ಪಕ್ಷೇತರರಾಗಿ ಸ್ಪರ್ಧೆ; ರಘುಪತಿ ಭಟ್ ಗೆ ಬಿಜೆಪಿ ನೊಟೀಸ್!

ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.

ಜೂ.03 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ನೈಋತ್ಯ ಪದವೀಧರರ ಕ್ಷೇತ್ರದಿಂದ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ಉಂಟುಮಾಡಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದು, 2 ದಿನಗಳಲ್ಲಿ ಪಕ್ಷಕ್ಕೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಬದಲಿಗೆ ಧನಂಜಯ ಸರ್ಜಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿದಾಗಿನಿಂದ ಮತ್ತು ಚುನಾವಣೆಯಲ್ಲಿ ಗೆದ್ದ ಯಶಪಾಲ್ ಸುವರ್ಣರನ್ನು ಕಣಕ್ಕಿಳಿಸಿದಾಗಿನಿಂದ ರಘುಪತಿ ಭಟ್ ಅಸಮಾಧಾನ ಹೊಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ