ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್! ಸಿಎಂ, ಡಿಸಿಎಂ, ಸಚಿವರ ಭೇಟಿಗೆ ಸದಾವಕಾಶ!

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಮೀಸಲಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಮೀಸಲಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಕೆಪಿಸಿಸಿ ಕಚೇರಿಯಲ್ಲಿ ಭೇಟಿಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಪಕ್ಷದ ಇಬ್ಬರು ಅಥವಾ ಮೂವರು ಪದಾಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಲಾಗುವುದು. ಪಕ್ಷದ ಕಾರ್ಯಕರ್ತರು ಒಂದು ವಾರ ಮುಂಚಿತವಾಗಿ ತಮ್ಮ ಸದಸ್ಯತ್ವ ಪ್ರಮಾಣಪತ್ರವನ್ನು ನೀಡಿ ಯಾವ ಸಚಿವರನ್ನು ಭೇಟಿಯಾಗಬೇಕೆಂದು ಲಿಖಿತ, SMS ಅಥವಾ ಇಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದು ರಾಜ್ಯಮಟ್ಟದಿಂದ ಬ್ಲಾಕ್‌ಮಟ್ಟದವರೆಗಿನ ಕಾರ್ಯಕರ್ತರಿಗೆ ಮಾತ್ರ ನೀಡಿರುವ ಅವಕಾಶವಾಗಿದೆ. ಮಾಜಿ ಸಚಿವರಿಗೆ, ಶಾಸಕರಿಗೆ ಈ ಭೇಟಿಯ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

'ಭಾರತ ಶ್ರೇಷ್ಠ ದೇಶ, ಮೋದಿ ತುಂಬಾ ಒಳ್ಳೆಯ ಸ್ನೇಹಿತ': 'ಇಂಡಿಯಾ ನರಕದ ಕೂಪ' ಎಂದಿದ್ದ ಟ್ರಂಪ್ ಯೂಟರ್ನ್

SSLC ಫಲಿತಾಂಶ ಪ್ರಕಟ: ಬಸ್ ಕಂಡಕ್ಟರ್ ಪುತ್ರ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಹೇಳಿದ್ದೇನು?

SCROLL FOR NEXT