ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ 
ರಾಜಕೀಯ

ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳುಕ ಸಂಪುಟ ಪುನರ್‌ರಚನೆ ಸಾಧ್ಯತೆಗಳಿವೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಅವರು ಸೋಮವಾರ ಹೇಳಿದರು.

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ಪುನರ್‌ರಚನೆ ಸಾಧ್ಯತೆಗಳಿವೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ರಚನೆ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪುನರ್‌ರಚನೆ ಆಗಬಹುದು ಎನ್ನುವ ಮೂಲಕ ಸಾಧ್ಯತೆಗಳ ಸುಳಿವು ನೀಡಿದರು.

ಚನ್ನಗಿರಿ ಲಾಕಪ್‌ ಸಾವು ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಲೋಪ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿ ಮೊದಲು ದೆಹಲಿಯ ವ್ಯವಸ್ಥೆ ಸರಿ ಮಾಡಲಿ ಎಂದು ಹೇಳಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರುವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

'ಅಪ್ಪಾ, ನನ್ನನ್ನು ಕಾಪಾಡಿ': ದೆಹಲಿಯಲ್ಲಿ 10 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ-ಕೊಲೆ, ಪುಟ್ಟ ಮಗುವಿನ ಕೊನೆಯ ಮಾತುಗಳು ವೈರಲ್!

'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ, ಜಲಸಂಧಿ ದಾಟಿದ ಭಾರತದ 11 ಹಡಗುಗಳು..!