ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ 
ರಾಜಕೀಯ

KPCC ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ, ಮುಂಬರುವ ಚುನಾವಣೆಗಳಿಗೆ ಡಿಕೆಶಿ ನೇತೃತ್ವ: ಕಾಂಗ್ರೆಸ್ ಸ್ಪಷ್ಟನೆ

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ.

ಬೆಂಗಳೂರು: ಮುಂಬರುವ ಚುನಾವಣೆಗಳನ್ನುನ್ನು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿಯೇ ಎದುರಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾವುದೇ ಬದಲಾವಣೆಗಿದು ಕಾಲವಲ್ಲ. ಮುಂಬರುವ ಬಿಬಿಎಂಪಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಡಿಕೆ.ಶಿವಕುಮಾರ್ ಅವರ ನೇತೃತ್ವದಲ್ಲಿಯೇ ಪಕ್ಷ ಎದುರಿಸಲಿದೆ. ಚುನಾವಣೆ ಕುರಿತು ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಲಿದೆ. ಶಿವಕುಮಾರ್ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಸ್ಥಾನ ತೊರೆಯಲು ಸಿದ್ಧ ಎಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ತಿರುಗೇಟು ನೀಡಿದರು.

ಕೆಪಿಸಿಸಿ ಅಧ್ಯಕ್ಷರಾಗುವ ಬಯಕೆ ಹಲವರಿಗಿದೆ. ಆದರೆ, ಈ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ವಿನಃ ಸಾರ್ವಜನಿಕವಾಗಿ ಮಾತನಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಸಲಹೆ ನೀಡಿದರು.

ಇದೇ ವೇಳೆ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಮಹಾರಾಷ್ಟ್ರದವರೇ ಆಗಿರುವುದರಿಂದ ಅವರು ಒಕ್ಕಲಿಗನಲ್ಲ ಎಂಬ ಬಿಜೆಪಿಯ ಮಾಜಿ ಸಚಿವ ಮುನಿರತ್ನ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

ಜಾತಿ ವಿಷಯ ಪ್ರಸ್ತಾಪಿಸಿದ ಮುನಿರತ್ನ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಹೇಳಿದರು.

ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ರಾಮೋಜಿಗೌಡ ಅವರಿಗೆ ಮೊದಲ ಸ್ಥಾನ ಸಿಗುವ ವಿಶ್ವಾಸವಿದೆ. ಹೀಗಾಗಿ ವಿರೋಧ ಪಕ್ಷದವರು ಇದನ್ನು ಅರಗಿಸಿಕೊಳ್ಳಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ನೌಕರರಿಗೆ ಅನುಕೂಲವಾಗುವಂತೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ತಿಳಿಸಿದರು.

7ನೇ ವೇತನ ಆಯೋಗದ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡಸಿ, ಚುನಾವಣಾ ಫಲಿತಾಂಶದ ನಂತರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲಿದೆ ಎಂದು ಪರಿಷತ್ ಮಾಜಿ ಅಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT