ಚಾಮುಂಡೇಶ್ವರಿ ದೇವಾಲಯದಲ್ಲಿ ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕಟುಕರಿಗೆ ಕಣ್ಣೀರು ಬರದು, ಮಾತೃ ಹೃದಯ ಇದ್ದವರಿಗೆ ಬರುತ್ತೆ: ನಿಖಿಲ್ ಬಗ್ಗೆ ವ್ಯಂಗ್ಯವಾಡಿದವರಿಗೆ ಕುಮಾರಸ್ವಾಮಿ ತಿರುಗೇಟು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು.

ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ‌.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು. ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ. ಅವರಿಗೆ ಕಣ್ಣೀರು ಬರುವುದಿಲ್ಲ. ಭಯ-ಭಕ್ತಿ ಇಲ್ಲದ ಅವರಿಗೆ ಕಣ್ಣೀರು ಬಾರದು. ನಮಗೆ ಜನರ ಕಷ್ಟ ನೋಡಿದರೆ ಕಣ್ಣೀರು ಬರುತ್ತದೆ ಎಂದರು.

ನಾನೂ ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಅದನ್ನು ಮಾಡಿರುವುದು ಅನುಕಂಪ‌ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು. ಪ್ರಧಾನಿ ಮೋದಿ ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT