ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ 'ಮ್ಯಾಚ್ ಫಿಕ್ಸಿಂಗ್' ಎಂದ ಬಿಜೆಪಿ

ಲೋಕಾಯುಕ್ತರು ಏನೂ ಮಾಡಲು ಸಾಧ್ಯವಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಇದು ಸಿದ್ದರಾಮಯ್ಯ ತಾನು ಪ್ರಾಮಾಣಿಕ ಎಂದು ತೋರಿಸಿಕೊಳ್ಳಲು ಮಾಡಿರುವ ವೇದಿಕೆಯ ನಾಟಕವಾಗಿದೆ.

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿರುವುದನ್ನು ಮ್ಯಾಚ್ ಫಿಕ್ಸಿಂಗ್ ಎಂದು ಬಿಜೆಪಿ ಬುಧವಾರ ಟೀಕಾ ಪ್ರಹಾರ ನಡೆಸಿದೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಅವರ ಮುಂದೆ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ, ಒಂದು ವೇಳೆ ಮುಖ್ಯಮಂತ್ರಿ ಪ್ರಾಮಾಣಿಕರಾಗಿದ್ದಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಪ್ರತಿಪಕ್ಷ ಸವಾಲು ಹಾಕಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಲೋಕಾಯುಕ್ತರು ಏನೂ ಮಾಡಲು ಸಾಧ್ಯವಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಇದು ಸಿದ್ದರಾಮಯ್ಯ ತಾನು ಪ್ರಾಮಾಣಿಕ ಎಂದು ತೋರಿಸಿಕೊಳ್ಳಲು ಮಾಡಿರುವ ವೇದಿಕೆಯ ನಾಟಕವಾಗಿದೆ. ಸಿದ್ದರಾಮಯ್ಯ ಒಂದು ವೇಳೆ ಪ್ರಾಮಾಣಿಕರಾಗಿದ್ದರೆ ಸಿಬಿಐಗೆ ವಹಿಸಲಿ. ಸತ್ಯ ಹೊರಬರಬೇಕಾದರೆ ಸಿಬಿಐಗೆ ವಹಿಸಿ ಎಂದು ಆಗ್ರಹಿಸುತ್ತೇನೆ. ನೀವು ಭ್ರಷ್ಟಾಚಾರದಲ್ಲಿ ಮುಳುಗಿರುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದರು.

ತನಿಖೆ ಮ್ಯಾಚ್ ಫಿಕ್ಸಿಂಗ್ ಆಗಿದೆಯೇ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸಿಎಂ ಅಧಿಕೃತ ಪ್ರವಾಸ ಪಟ್ಟಿ ಪ್ರಕಾರ ಬೆಳಗ್ಗೆ 10ಕ್ಕೆ ಲೋಕಾಯುಕ್ತರು ವಿಚಾರಣೆಗೆ ಹಾಜರು, ಅಪರಾಹ್ನ 12ಕ್ಕೆ ಚನ್ನಪಟ್ಟಣ ಉಪ ಚುನಾವಣಾ ಪ್ರಚಾರ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದು, ಲೋಕಾಯುಕ್ತ ಅಧಿಕಾರಿಗಳಿಗೆ ಇಂತಿಷ್ಟೇ ಸಮಯವೆಂದು ನಿರ್ದೇಶನ ಮಾಡುವುದು ಹೇಗೆ ಸಾಧ್ಯ ಎಂದು ಕೇಳಿದರು.

16 ತಿಂಗಳ ಕಾಂಗ್ರೆಸ್ ಆಡಳಿತದಲ್ಲಿ ಮಂತ್ರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯವನ್ನು ಲೂಟಿ ಮಾಡಿರುವುದು ರಾಜ್ಯದ ಜನತೆಗೆ ನಾಚಿಕೆಯಾಗುತ್ತಿದೆ. ಮುಖ್ಯಮಂತ್ರಿಗಳು ತಮ್ಮ ಅಧೀನ ಪೊಲೀಸ್ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾದಾಗ ಏನು ಹೇಳಬೇಕು. ಸ್ವತಃ ಮುಖ್ಯಮಂತ್ರಿಗಳೇ ಪೊಲೀಸ್ ಅಧಿಕಾರಿಗೆ ಪೋಸ್ಟಿಂಗ್ ನೀಡಿದ್ದಾರೆ. ಈಗ ಅದೇ ಅಧಿಕಾರಿ ಆತನನ್ನು ಹೇಗೆ ತನಿಖೆ ಮಾಡುತ್ತಾರೆ,’’ ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ಲೋಕಸಭೆ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮುಖ್ಯಮಂತ್ರಿ ಲೋಕಾಯುಕ್ತ ಕಚೇರಿಗೆ ತೆರಳುವಾಗ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧರಣಿ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಅವರನ್ನು ಮುನ್ನೆಚ್ಚರಿಕೆ ವಹಿಸಿ ನಂತರ ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT