ಧರಣಿ ಅಂತ್ಯ 
ರಾಜಕೀಯ

JPC ಅಧ್ಯಕ್ಷರಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಭರವಸೆ: ಯತ್ನಾಳ್ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿದರು.

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 'ವಕ್ಫ್ ಹಠಾವೋ, ದೇಶ ಬಚಾವೋ' ಎಂಬ ಘೋಷಣೆಯೊಂದಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಗುರುವಾರ ಅಂತ್ಯವಾಗಿದೆ.

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿ, ವಕ್ಪ್ ಬೋರ್ಡ್ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದರು. ಅಲ್ಲದೆ ಎಲ್ಲಾ ಸಮಸ್ಯೆಗಳಿಗೆ ಹೊಸ ವಕ್ಪ್ ತಿದ್ದುಪಡಿ ಕಾಯ್ದೆ ಮೂಲಕ ಪರಿಹಾರ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.

ಈ ವೇಳೆ ಮಾತನಾಡ ಪಾಲ್ ಅವರು, ಜೆಪಿಸಿ ಮೂಲಕ ವಕ್ಪ್ ಕಾಯ್ದೆಗೆ ಪಾರದರ್ಶಕ ತಿದ್ದುಪಡಿ ತರಲಾಗುವುದು. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಭವಿಷ್ಯದಲ್ಲಿ ವಕ್ಪ್ ನಿಂದ ರೈತರಿಗೆ, ಮಠ, ಮಂದಿರ, ಐತಿಹಾಸಿಕ ಸ್ಮಾರಕ ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ತರಲು ಜೆಪಿಸಿ ಪೂರಕ ಸಲಹೆ ನೀಡಲಿದೆ ಎಂದು ಹೇಳಿದರು.

ಅಗತ್ಯಬಿದ್ದರೆ ರೈತರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಕ್ಫ್ ಬೋರ್ಡ್ ಅಧಿಕಾರಿಗಳನ್ನು ದೆಹಲಿಗೆ ಕರೆಯಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಲ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT