ಎಸ್ ಟಿ ಸೋಮಶೇಖರ್ 
ರಾಜಕೀಯ

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಏಕವಚನದಲ್ಲೇ ಎಸ್‌ ಟಿ ಸೋಮಶೇಖರ್ ವಾಗ್ದಾಳಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ತಮ್ಮದೇ ಪಕ್ಷದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲೇ ತೀವ್ರ ವಾಗ್ದಾಳಿ ನಡೆಸಿದ್ದು, ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂತಾದರೆ ಕ್ಷೇತ್ರಕ್ಕೆ ಬರಲಿ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣ ಉಪಚನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಎಸ್ ಟಿ ಸೋಮಶೇಖರ್ ಅವರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

ಇಂದು ಬೆಂಗಳೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯಿಸಿದ ಎಸ್ ಟಿ ಸೋಮಶೇಖರ್ ಅವರು,``ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂತಾದರೆ ಕ್ಷೇತ್ರಕ್ಕೆ ಬರಲಿ.. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಯಶವಂತಪುರದಲ್ಲಿ ಹೇಗೂ ಗೆದ್ದಿದ್ದಳಲ್ಲ ಅವಳು, ತಾಕತ್ ಇದ್ದರೆ ಯಶವಂತಪುರದಲ್ಲಿ ಅವಳೂ ನಿಲ್ಲಲಿ.. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗುತ್ತದೆ. ಪಾಪದ ಕೊಡ ತುಂಬುವವರೆಗೂ ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆಮೇಲೆ ನಾನು ಮಾತನಾಡುತ್ತೇನೆ, ನನಗೆ ಏನೂ ಮಾತು ಬರಲ್ಲ ಅಂತಾ ಅಲ್ಲ.. ಅವಳ ಹತ್ತರಷ್ಟು ನಾನು ಮಾತಾಡುತ್ತೇನೆ ಎಂದು ಮಾಜಿ ಸಚಿವರು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಏನೂ ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ, ನನ್ನ ತಾಕತ್ ಬಗ್ಗೆ, ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಇಲ್ಲ ಈ ಯಮ್ಮನಿಗೆ.. ತಾಳ್ಮೆಯಿಂದ ಇದ್ದರೆ ಸರಿ, ಇಲ್ಲದಿದ್ದರೆ ಪಾಪದ ಕೊಡ ತುಂಬುತ್ತಿದೆ, ತುಂಬಿದ ಮೇಲೆ ಹೇಳುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT