ಎಸ್ ಟಿ ಸೋಮಶೇಖರ್ 
ರಾಜಕೀಯ

ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಏಕವಚನದಲ್ಲೇ ಎಸ್‌ ಟಿ ಸೋಮಶೇಖರ್ ವಾಗ್ದಾಳಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ತಮ್ಮದೇ ಪಕ್ಷದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲೇ ತೀವ್ರ ವಾಗ್ದಾಳಿ ನಡೆಸಿದ್ದು, ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂತಾದರೆ ಕ್ಷೇತ್ರಕ್ಕೆ ಬರಲಿ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣ ಉಪಚನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಎಸ್ ಟಿ ಸೋಮಶೇಖರ್ ಅವರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಸೋಮಶೇಖರ್ ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎಂದಿದ್ದರು.

ಇಂದು ಬೆಂಗಳೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯಿಸಿದ ಎಸ್ ಟಿ ಸೋಮಶೇಖರ್ ಅವರು,``ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂತಾದರೆ ಕ್ಷೇತ್ರಕ್ಕೆ ಬರಲಿ.. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಯಶವಂತಪುರದಲ್ಲಿ ಹೇಗೂ ಗೆದ್ದಿದ್ದಳಲ್ಲ ಅವಳು, ತಾಕತ್ ಇದ್ದರೆ ಯಶವಂತಪುರದಲ್ಲಿ ಅವಳೂ ನಿಲ್ಲಲಿ.. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗುತ್ತದೆ. ಪಾಪದ ಕೊಡ ತುಂಬುವವರೆಗೂ ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆಮೇಲೆ ನಾನು ಮಾತನಾಡುತ್ತೇನೆ, ನನಗೆ ಏನೂ ಮಾತು ಬರಲ್ಲ ಅಂತಾ ಅಲ್ಲ.. ಅವಳ ಹತ್ತರಷ್ಟು ನಾನು ಮಾತಾಡುತ್ತೇನೆ ಎಂದು ಮಾಜಿ ಸಚಿವರು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಏನೂ ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ, ನನ್ನ ತಾಕತ್ ಬಗ್ಗೆ, ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಇಲ್ಲ ಈ ಯಮ್ಮನಿಗೆ.. ತಾಳ್ಮೆಯಿಂದ ಇದ್ದರೆ ಸರಿ, ಇಲ್ಲದಿದ್ದರೆ ಪಾಪದ ಕೊಡ ತುಂಬುತ್ತಿದೆ, ತುಂಬಿದ ಮೇಲೆ ಹೇಳುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT