ಸಿದ್ದರಾಮಯ್ಯ ಮತ್ತು ದೇವೇಗೌಡ 
ರಾಜಕೀಯ

'ಇನ್ನೊಬ್ಬರನ್ನು ಮುಗಿಸುವುದರಲ್ಲಿ ದೇವೇಗೌಡ ನಂಬರ್ 1, ಕಣ್ಣೀರಿಗೆ ಮರುಳಾಗಬೇಡಿ': ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯನನ್ನು ನಾನು ಸಿಎಂ ಮಾಡಿದೆ ಅಂತ ಹೇಳುತ್ತಾರೆ. ಮಿಸ್ಟರ್ ದೇವೇಗೌಡ ನಿನ್ನನ್ನು ಸಿಎಂ ಮಾಡಿದ್ದು ಯಾರು? ನಾನು ಇಲ್ಲದಿದ್ದರೆ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದರು.

ರಾಮನಗರ: ದೇವೇಗೌಡರು ಯಾವ ಒಕ್ಕಲಿಗ ನಾಯಕರನ್ನು ಬೆಳೆಸುವುದಿಲ್ಲ. ಅವರು ರಾಜಕೀಯವಾಗಿ ಇನ್ನೊಬ್ಬರನ್ನು ಮುಗಿಸುವುದರಲ್ಲಿ ಮತ್ತು ದ್ವೇಷ ರಾಜಕಾರಣ ಮಾಡುವುದರಲ್ಲಿ ನಂಬರ್ 1 ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಂದು ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಸಿದ್ದರಾಮಯ್ಯನನ್ನು ನಾನು ಸಿಎಂ ಮಾಡಿದೆ ಅಂತ ಹೇಳುತ್ತಾರೆ. ಮಿಸ್ಟರ್ ದೇವೇಗೌಡ ನಿನ್ನನ್ನು ಸಿಎಂ ಮಾಡಿದ್ದು ಯಾರು? ನಾನು ಇಲ್ಲದಿದ್ದರೆ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದರು.

ಅಳೋದು ನಮ್ಮ ಪರಂಪರೆ, ವಂಶಪಾರಂಪರ್ಯ ಅಂತಾರೆ, ಪಾಪ ಆ ನಿಖಿಲ್ ಗೂ ಅಳೋದನ್ನು ಕಲಿಸಿಬಿಟ್ಟಿದ್ದಾರೆ. ಹಾಸನದಲ್ಲಿ ನೀವು ಅಳಬೇಕು. ಅಲ್ಲಿ ಹೋಗಿ ದೇವೇಗೌಡ, ಕುಮಾರಸ್ವಾಮಿ ಅಳಬೇಕು. ಆದರೆ ಪಾಪ ಆ ಹೆಣ್ಣುಮಕ್ಕಳು ಅಳುತ್ತಿದ್ದಾರೆ. ದಯವಿಟ್ಟು ನೀವು ಯಾರೂ ಅವರ ಕಣ್ಣೀರಿಗೆ ಮರುಳಾಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಕ್ಕೆ ಅವರಿಗೆ ಹೊಟ್ಟೆ ಉರಿ. ದೇವೇಗೌಡರೇ ನಿಮ್ಮ ಹೊಟ್ಟೆ ಉರಿ ನಿಮ್ಮನ್ನೇ ಸುಡುತ್ತದೆ ಎಂದು ಸಿದ್ದರಾಮಯ್ಯ, ಮಾಜಿ ಪ್ರಧಾನಿ ವಿರುದ್ಧ ಕಿಡಿ ಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT