ಚನ್ನಪಟ್ಟಣದಲ್ಲಿ ದೇವೇಗೌಡರ ಪ್ರಚಾರ 
ರಾಜಕೀಯ

ಮೂರು ಕ್ಷೇತ್ರಗಳ ಉಪ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಸ್ಥಗಿತ: ಎಚ್.ಡಿ ದೇವೇಗೌಡ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಖಾತರಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ದೇವೇಗೌಡರು ತಿಳಿಸಿದರು.

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ತಮ್ಮ ಮೊಮ್ಮಗ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಚನ್ನಪಟ್ಟಣದ ಟಿಪ್ಪು ನಗರದ ಪೀರ್ ಸಾಬ್ ಗಲ್ಲಿಯಲ್ಲಿರುವ ಅಖಿಲ್ ಶಾ ಖಾದ್ರಿ ದರ್ಗಾದ ಧಾರ್ಮಿಕ ಮುಖಂಡ ಸೈಯದ್ ಮಸನ್ ಶಾ ಖಾದ್ರಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದರು.

ಈ ವೇಳೆ ಉಪಚುನಾವಣೆಯಲ್ಲಿ ನಿಖಿಲ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ವಿಧಾನಸಭೆಗೆ ಆಯ್ಕೆ ಮಾಡಿದರೆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. ಮುಂಬರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಖಾತರಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ದೇವೇಗೌಡರು ತಿಳಿಸಿದರು.

“ಈ ಸರ್ಕಾರ ದಿವಾಳಿಯಾಗಿದೆ. ಚುನಾವಣೆಯ ನಂತರ, ಅವರು ಮತ್ತೆ ಹಣವನ್ನು ಠೇವಣಿ ಇಡುವುದನ್ನು ನಿಲ್ಲಿಸುತ್ತಾರೆ. ಐದು ಖಾತರಿಗಳಲ್ಲಿ ಒಂದನ್ನು ಈಗಾಗಲೇ ಹಿಂಪಡೆಯಲಾಗಿದೆ. ಬೆಂಗಳೂರಿನಲ್ಲಿ ಗುಂಡಿ ತುಂಬಲು ಅವರ ಬಳಿ ಹಣವಿಲ್ಲ ಜನರು ಆಕ್ರೋಶಗೊಂಡಿದ್ದಾರೆ’ ಎಂದು ಗೌಡರು, ಕಾಂಗ್ರೆಸ್ ಸರ್ಕಾರ ಖಜಾನೆ ಖಾಲಿ ಮಾಡಿದೆ. ರಾಜ್ಯಾದ್ಯಂತ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆಗುತ್ತಿಲ್ಲ. ಚನ್ನಪಟ್ಟಣದಲ್ಲಿ ಮಾತ್ರ ಹಣ ಜಮಾ ಮಾಡಲಾಗಿದೆ... ಉಪಚುನಾವಣೆಯ ಮೇಲೆ ಕಣ್ಣಿಟ್ಟು ಈ ರೀತಿ ಮಾಡಲಾಗಿದೆ ಎಂದರು. ಇದೇ ವೇಳೆ ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಕೂಡ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರಿಗೆ ಬೆಂಬಲ ಸೂಚಿಸಲು ಸಮುದಾಯದವರನ್ನು ಭೇಟಿ ಮಾಡಿದ್ದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಸುಮಾರು 25,000 ಮುಸ್ಲಿಂ ಮತದಾರರನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT