ಸಿಎಂ ಸಿದ್ದರಾಮಯ್ಯ  
ರಾಜಕೀಯ

ಮುಗಿದ ಮಿನಿ ಮಹಾಸಮರ: ಕುರುಬ ಸಮುದಾಯದ ಓಲೈಕೆಗಾಗಿ ಮಹಾರಾಷ್ಟ್ರಕ್ಕೆ ಸಿದ್ದರಾಮಯ್ಯ!

ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಪ್ರಭಾವಿ ಬಣವಾಗಿರುವ ದಂಗರ್ ಕುರುಬ ಸಮುದಾಯ ಚುನಾವಣೆಯಲ್ಲಿ ಮಹತ್ತರ ಪ್ರಭಾವ ಬೀರುವ ಸಾಧ್ಯತೆಯಿದೆ.

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ತೆರೆ ಬಿದ್ದಿದೆ, ಹೀಗಾಗಿ ಸಿಎಂ ಸಿದ್ದರಾಮಮಯ್ಯ ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಶೀಘ್ರವೇ ತೆರಳಲಿದ್ದಾರೆ. ನವೆಂಬರ್ 15 ಕ್ಕೆ ಮಹಾರಾಷ್ಟ್ರಕ್ಕೆ ತೆರಳಲಿದ್ದು, ಅಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ.

ಅಸಾಧಾರಣ ಅಹಿಂದ ನಾಯಕ ಮತ್ತು ಕುರುಬ ಐಕಾನ್ ಆಗಿರುವ ಸಿದ್ದರಾಮಯ್ಯ ಅವರು ಧಂಗರ್-ಕುರುಬ ಮತ ಬ್ಯಾಂಕ್ ಅನ್ನು ಒಟ್ಟುಗೂಡಿಸುವ ನಿರೀಕ್ಷೆಯಿದೆ. ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಪ್ರಭಾವಿ ಬಣವಾಗಿರುವ ದಂಗರ್ ಕುರುಬ ಸಮುದಾಯ ಚುನಾವಣೆಯಲ್ಲಿ ಮಹತ್ತರ ಪ್ರಭಾವ ಬೀರುವ ಸಾಧ್ಯತೆಯಿದೆ. ಎರಡು ದಿನಗಳ ಪ್ರವಾಸದಲ್ಲಿ ಸಿದ್ದರಾಮಯ್ಯ ಸಮುದಾಯವನ್ನು ಓಲೈಸಲು ಸರಣಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭೇಟಿಯು ದಕ್ಷಿಣ ಮಹಾರಾಷ್ಟ್ರದಲ್ಲಿ ಪ್ರಭಾವವನ್ನು ಬೀರಲು ಮತ್ತು ನಿರ್ಣಾಯಕ ನೆಲೆಯನ್ನು ಭದ್ರಪಡಿಸಲಿದೆ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ಸಾಂಗ್ಲಿ ಮತ್ತು ಕೊಲ್ಲಾಪುರದ ಸುತ್ತಲೂ ವಿಶೇಷವಾಗಿ ಪ್ರಚಾರ ನಡೆಸಲಿದ್ದಾರೆ. ಈ ಪ್ರದೇಶದಲ್ಲಿ ಧಂಗರ್-ಕುರುಬರು ಗಣನೀಯ ಸಂಖ್ಯೆಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಖಚಿತಪಡಿಸಿವೆ.

ಮಹಾರಾಷ್ಟ್ರ ಬಿಜೆಪಿ ನಾಯಕರ ಇತ್ತೀಚಿನ ಟೀಕೆಗಳಿಗೆ ತಿರುಗೇಟು ನೀಡಿದ ಮಾಜಿ ಸಚಿವ ಮತ್ತು ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌ಎಂ ರೇವಣ್ಣ, “ಖಾತ್ರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆಗಸ್ಟ್ ವರೆಗೆ ಎಲ್ಲಾ ವಿತರಣೆಗಳನ್ನು ಮಾಡಲಾಗಿದೆ. ನವೆಂಬರ್ ತಿಂಗಳ ವೇತನವನ್ನು ತಿಂಗಳ ಅಂತ್ಯದ ವೇಳೆಗೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಮಹಾರಾಷ್ಟ್ರದ ಮತದಾರರಿಗೆ ಭರವಸೆಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಲಿದ್ದಾರೆ ಎಂದು ತಿಳಿಸಿದ್ದಾರೆ. ಕುರಿ ಸಾಕಾಣಿಕೆ ಮಾಡುತ್ತಿರುವ ಕರ್ನಾಟಕದ ಕುರುಬರು ಮತ್ತು ಮಹಾರಾಷ್ಟ್ರದ ಧಂಗಾರ್‌ಗಳ ನಡುವೆ ಬಂಧುತ್ವವಿದೆ ಎಂದು ರೇವಣ್ಣ ಹೇಳಿದರು. ಕುರುಬ ಸಮುದಾಯವು ಭಾರತದಾದ್ಯಂತ 12 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಕರ್ನಾಟಕದಿಂದ ಮಹಾರಾಷ್ಟ್ರದವರೆಗೆ ಅವರ ಒಗ್ಗಟ್ಟು ಪ್ರಬಲವಾಗಿದೆ ಎಂದು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT